ದೆಹಲಿ: ಸಿಎಂ ದುಬಾರ್ ವಾಚ್ ಕುರಿತಂತೆ ರಾಜ್ಯದ ಉಸ್ತುವಾರಿ ಹೊತ್ತಿರುವ ದಿಗ್ವಿಜಯ್ ಸಿಂಗ್ ಸಂಪೂರ್ಣ ವರದಿ ನೀಡುವಂತೆ ಹೈಕಮಾಂಡ್ ಇಂದು ಆದೇಶಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾಗ ಸೋನಿಯಾ ಅವರನ್ನು ಭೇಟಿ ಮಾಡಿ, ವಾಚ್ ವಿಷಯ ಒಂದು ಸಮಸ್ಯೆಯೇ ಅಲ್ಲ. ದುಬಾರಿ ವಾಚ್ ನಾನು ಖರೀದಿಸಿದ್ದಲ್ಲ. ಗೆಳೆಯರೊಬ್ಬರು ಉಡುಗೊರೆಯಾಗಿ ಕೊಟ್ಟಿದ್ದರು ಎಂದು ಮಾಹಿತಿ ನೀಡಿದ್ದರು. ಈ ಹಿನ್ನಲೆಯಲ್ಲಿ ಸಿಎಂ ಸ್ಪಷ್ಟೀಕರಣ ತೃಪ್ತಿ ತಂದಿಲ್ಲವಾದ್ದರಿಂದ ಕೂಡಲೇ ವರದಿ ನೀಡುವಂತೆ ದಿಗ್ವಿಜಯ್ ಸಿಂಗ್ಗೆ ಆದೇಶ ನೀಡಲಾಗಿದೆ.
ಹೆಬ್ಬಾಳ ಉಪಚುನಾವಣೆ ಫಲಿತಾಂಶ ಮತ್ತು ಜಿಪಂ ಹಾಗೂ ತಾಪಂ ಚುನಾವಣೆ ಫಲಿತಾಂಶ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೆಲ ಹಿರಿಯ ಕಾಂಗ್ರೆಸ್ ಮುಖಂಡರು ಸೋನಿಯಾ ಗಾಂಧಿಗೆ ದೂರು ನೀಡಿದ್ದರು ಎನ್ನಲಾಗಿದೆ.