ನವದೆಹಲಿ: ರೋಹಿತ್ ವೇಮುಲ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಟೀಕೆ ಎದುರಿಸುತ್ತಿರುವ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ವಿರುದ್ಧ ಮಂಗಳವಾರವೂ ಆಕ್ರೋಶ ಮುಂದುವರಿಯಿತು.
ಕಲಾಪ ಆರಂಭವಾಗುತ್ತಿದ್ದಂತೆ ಸ್ಮೃತಿ ಇರಾನಿ ವಿರುದ್ಧ ಘೊಷಣೆಗಳು ಕೇಳಿಬಂದವು. ಇರಾನಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ ವಿಪಕ್ಷ ನಾಯಕರು ಕಲಾಪಕ್ಕೆ ಅಡ್ಡಿಪಡಿಸಿದವು.
ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಕೋಲಾಹಲ ಸೃಷ್ಟಿಯಾಗಿದ್ದು, ಕಲಾಪಗಳು ಮುಂದೂಡಲ್ಪಟ್ಟಿವೆ.