ರಾಷ್ಟ್ರೀಯ

ಕ್ರೀಡೆಯಲ್ಲಿ ರಾಜಕೀಯ ಬೇಡ, ಅನುರಾಗ್ ಠಾಕುರ್ ಅಭಿಮತ

Pinterest LinkedIn Tumblr

anurag-thakur-webನವದೆಹಲಿ: ಕ್ರೀಡೆಯಲ್ಲಿ ಯಾವುದೇ ಕಾರಣಕ್ಕೂ ರಾಜಕೀಯ ಬೆರೆಸಬಾರದು ಎಂದು ಬಿಸಿಸಿಐ ಪ್ರಧಾನ ಕಾರ್ಯದರ್ಶಿ ಅನುರಾಗ್ ಠಾಕುರ್ ತಿಳಿಸಿದರು.

ಮಾರ್ಚ್ 19ರಂದು ಧರ್ಮಶಾಲಾದಲ್ಲಿ ನಡೆಯಲಿರುವ ಟಿ 20 ವಿಶ್ವಕಪ್​ನ ಹೈವೋಲ್ಟೇಜ್ ಇಂಡೋ-ಪಾಕ್ ಪಂದ್ಯಕ್ಕೆ ಭದ್ರತಾ ವಿಚಾರವಾಗಿ ಪ್ರತಿಕ್ರಿಯಿಸಿದ ಠಾಕುರ್, ಹಿಮಾಚಲ ಪ್ರದೇಶ ಸರ್ಕಾರ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕಾಗಿದೆ. ಈ ಕುರಿತು ಕೇಂದ್ರ ಸರ್ಕಾರದೊಡನೆ ಮಾತುಕತೆ ನಡೆಸಿ ಸೂಕ್ತ ಭದ್ರತೆ ನೀಡಲಾಗುವುದು ಎಂದು ಹೇಳಿದರು.

ಭಾರತ ಮತ್ತು ಪಾಕಿಸ್ತಾನ ನಡುವೆ ಧರ್ಮಶಾಲಾದಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯಕ್ಕೆ ಭದ್ರತೆ ಒದಗಿಸುವುದು ಕಷ್ಟ ಎಂದು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ವೀರಭದ್ರ ಸಿಂಗ್ ಗೃಹ ಸಚಿವಾಲಯಕ್ಕೆ ಮಂಗಳವಾರ ಪತ್ರ ಬರೆದಿದ್ದರು.

Write A Comment