ನವದೆಹಲಿ (ಪಿಟಿಐ): ಆರ್ಥಿಕ ಸಂಕಷ್ಟದಲ್ಲಿ ಸಿಲುಕಿ ನಲುಗುತ್ತಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ದೇಶ ಬಿಡದಂತೆ ನಿರ್ದೇಶನ ನೀಡಲು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಮಂಗಳವಾರ ಅರ್ಜಿ ಸಲ್ಲಿಕೆಯಾಗಿದೆ.
17 ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ(ಪಿಎಸ್ಯು) ಒಕ್ಕೂಟ ಸಲ್ಲಿಸಿರುವ ಈ ಅರ್ಜಿ ವಿಚಾರಣೆಯನ್ನು ಬುಧವಾರ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.
ಅರ್ಜಿಯನ್ನು ತ್ವರಿತ ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು ಕೋರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯನ್ಯಾಯಮೂರ್ತಿ ಟಿ.ಎಸ್.ಠಾಕೂರ್ ಹಾಗೂ ನ್ಯಾಯಮೂರ್ತಿ ಯು.ಯು.ಲಲಿತ್ ಅವರಿದ್ದ ಪೀಠ, ‘ನಾಳೆಯ ವಿಚಾರಣಾ ಪಟ್ಟಿಗೆ ಸೇರಿಸಿ’ ಎಂದು ಸೂಚಿಸಿತು.