ರಾಷ್ಟ್ರೀಯ

ನಿಜ ಜೀವನದಲ್ಲೂ ಅನುಪಮ್ ವಿಲನ್ ಆಗಿದ್ದಾರೆ: ಯೋಗಿ ಆದಿತ್ಯನಾಥ್

Pinterest LinkedIn Tumblr

YogiAnupam

ಗೋರಾಖ್ಪುರ: ಬಾಲಿವುಡ್ ನಟ ಅನುಪಮ್ ಖೇರ್ ಅವರು ನಿಜ ಜೀವನದಲ್ಲೂ ಖಳನಾಯಕನಾಗಿದ್ದಾರೆಂದು ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.

ಈ ಕುರಿತಂತೆ ಕೋಲ್ಕತಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಅನುಪಮ್ ಖೇರ್ ಖಳನಾಯಕನೆಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಅನುಪಮ್ ಖೇರ್ ಅವರು ನಟನೆಯಲ್ಲಿ ಮಾತ್ರವೇ ಖಳನಾಯಕನಲ್ಲ. ನಿಜ ಜೀವನದಲ್ಲೂ ಖಳನಾಯಕರಾಗಿದ್ದಾರೆ. ಕೋಲ್ಕತಾದಲ್ಲಿ ಖೇರ್ ಅವರು ನೀಡಿದ್ದ ಹೇಳಿಕೆ ಸಂಬಂಧ ಮತ್ತೇನನ್ನೂ ಹೇಳಲು ಇಚ್ಛಿಸುವುದಿಲ್ಲ ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಕೋಲ್ಕತಾದಲ್ಲಿ ಬೆಳೆಯುತ್ತಿರುವ ಅಸಹಿಷ್ಣುತೆ ಕುರಿತಂತೆ ಚರ್ಚೆಯೊಂದರಲ್ಲಿ ಮಾತನಾಡಿದ್ದ ಅನುಪಮ್ ಖೇರ್ ಅವರು, ಸಾಧ್ವಿ ಪ್ರಾಚಿ ಹಾಗೂ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಕಿಡಿಕಾರಿದ್ದರು. ಯೋಗಿ ಹಾಗೂ ಸಾಧ್ವಿ ಪ್ರಾಚಿಯವರು ಅಸಂಬ್ಧವಾಗಿ ಮಾತನಾಡುತ್ತಿದ್ದಾರೆ. ಅವರನ್ನು ಕೂಡಲೇ ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಬೇಕು ಮತ್ತು ಜೈಲಿಗೆ ಹಾಕಬೇಕು ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಯೋಗಿ ಆದಿತ್ಯನಾಥ್ ಈ ರೀತಿಯಾಗಿ ಹೇಳಿಕೆ ನೀಡಿದ್ದಾರೆ.

Write A Comment