ರಾಷ್ಟ್ರೀಯ

ದಲಿತನ ಮರ್ಯಾದಾ ಹತ್ಯೆ: ಯುವತಿಯ ತಂದೆ ಪೊಲೀಸರಿಗೆ ಶರಣು

Pinterest LinkedIn Tumblr

gg

ತಮಿಳುನಾಡು: ದಲಿತನೋರ್ವ ತಮ್ಮ ಜಾತಿಯ ಹುಡುಗಿಯನ್ನು ವಿವಾಹವಾಗಿದ್ದಾನೆಂಬ ಕಾರಣಕ್ಕೆ ಯುವಕನನ್ನು ನಡುರಸ್ತೆಯಲ್ಲೇ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಯುವತಿಯ ತಂದೆ ಪೊಲೀಸರಿಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ.

ನಿನ್ನೆಯಷ್ಟೇ ದಲಿತ ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ಸಿಸಿಟಿವಿಯ ದೃಶ್ಯವೊಂದು ಸಾಕಷ್ಟು ಸುದ್ದಿ ಮಾಡಿತ್ತು.
ತಮಿಳುನಾಡಿದ ತಿರುಪ್ಪೊರಿನ ಉದುಮಲೈಪೆಟ್ಟೈಯಲ್ಲಿ ಘಟನೆ ನಡೆದಿತ್ತು. ತನ್ನ ಮಡದಿಯೊಂದಿಗೆ ರಸ್ತೆ ದಾಟುವ ವೇಳೆ ವಾಹನದಲ್ಲಿ ಬಂದಿರುವ ವ್ಯಕ್ತಿಗಳು ನಡುರಸ್ತೆಯಲ್ಲೇ ಅಟ್ಟಾಡಿಸಿಕೊಂಡು ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ನಂತರ ಯುವಕನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿತ್ತಾದರೂ ಯುವಕ ಸಾವನ್ನಪ್ಪಿದ್ದ

ಶಂಕರ್ ಹತ್ಯೆಯಾಗಿದ್ದ ಯುವಕನಾಗಿದ್ದು, ಪೊಲ್ಲಾಚಿಯಲ್ಲಿ ಮೊದಲೇ ವರ್ಷದ ಎಂಜಿನಿಯರಿಂಗ ಓದುತ್ತಿದ್ದ. ಕೌಸಲ್ಯ ಉದಾಮಲ್ ಪೇಟೆಯಲ್ಲ ಬಿಎಸ್ ಸಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಯಾಗಿದ್ದಳು. ಕೌಸಲ್ಯ ಮೇಲ್ಜಾತಿಯ ಯುವತಿಯಾಗಿದ್ದು ಅವರ ಕುಟುಂಬಕ್ಕ ಇವರಿಬ್ಬರ ಮದುವೆಗೆ ವಿರೋಧ ವ್ಯಕ್ತಪಡಿಸಿತ್ತು. ಇದರ ನಡುವೆಯೂ ಶಂಕರ್ ಕೌಸಲ್ಯಳನ್ನು ವಿವಾಹವಾಗಿದ್ದ.

ಈ ಹಿನ್ನೆಲೆಯಲ್ಲಿ ಕೌಸಲ್ಯ ಸಂಬಂಧಿಕರು ಶಂಕರ್ ಮೇಲೆ ದಾಳಿ ಮಾಡಿದ್ದಾರೆನ್ನಲಾಗಿದೆ. ಇದೀಗ ಯುವತಿಯ ತಂದೆ ಪೊಲೀಸರ ಬಳಿ ಶರಣಾಗಿದ್ದು, ಹತ್ಯೆ ಹಿಂದೆ ತಮ್ಮ ಪಾತ್ರವಿಲ್ಲ ಎಂದು ಹೇಳಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Write A Comment