ದಂಟೆವಾಡ: ಛತ್ತೀಸ್ಗಢದ ನಕ್ಸಲ್ ಪೀಡಿತ ದಂಟೆವಾಡ ಜಿಲ್ಲೆಯಲ್ಲಿ ಬುಧವಾರ ನಕ್ಸರು ಐಇಡಿ ಬಾಂಬ್ ಸ್ಫೋಟಿಸಿದ್ದು, ಘಟನೆಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್)ಯ ಏಳು ಯೋಧರು ಮೃತಪಟ್ಟಿದ್ದಾರೆ.
ಐಇಡಿ ಸ್ಫೋಟದಲ್ಲಿ ಸಿಆರ್ ಪಿಎಫ್ ನ 230ನೇ ಬಟಾಲಿಯನ್ ಗೆ ಏಳು ಯೋಧರು ಮೃತಪಟ್ಟಿರುವುದಾಗಿ ದಂಟೆವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಮಲೋಚನ್ ಕಶ್ಯಪ್ ಅವರು ಎಎನ್ಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಸ್ಫೋಟದಲ್ಲಿ ಕೆಲವು ಯೋಧರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.