ರಾಷ್ಟ್ರೀಯ

ಅಂಬೇಡ್ಕರ್‌ ಮಹಾನ್‌ ಮಾನವತಾವಾದಿ: ಮೋದಿ

Pinterest LinkedIn Tumblr

mooooooodನವದೆಹಲಿ (ಪಿಟಿಐ): ದೇಶದಲ್ಲಿ ತಮ್ಮ ಜೀವನದ ಉದ್ದಕ್ಕೂ ಅವಮಾನಗಳನ್ನು ಸಹಿಸಿಕೊಂಡು, ಸಮಾನ ಹಕ್ಕುಗಳಿಗಾಗಿ ಹೋರಾಟ ಮಾಡುವ ಮೂಲಕ ಅಂಬೆಡ್ಕರ್‌ ಭಾರತಕ್ಕೆ ಮಾತ್ರವಲ್ಲದೆ ವಿಶ್ವಕ್ಕೆ ಮಹಾನ್‌ ಮಾನವತಾವಾದಿಯಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಅಂಬೇಡ್ಕರ್‌ ಅವರ 125ನೇ ಜನ್ಮದಿನದ ಅಂಗವಾಗಿ ಅವರ ಹುಟ್ಟೂರು ಮಹಾರಾಷ್ಟ್ರದ ಮಹೂಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

ಅವರ ಜನ್ಮ ಸ್ಥಳಕ್ಕೆ ಭೇಟಿ ನೀಡಿರುವುದು ನನಗೆ ಅತೀವ ಸಂತೋಷವಾಗಿದೆ. ಈ ವಿಷಯದಲ್ಲಿ ನಾನು ಭಾಗ್ಯಶಾಲಿ ಎಂದರು.

ಅಂಬೇಡ್ಕರ್‌ ಅವರ ಸಾಮಾಜಿಕ ಹೋರಾಟ, ಸಮಾನತೆ ಮತ್ತು ಗೌರವಕ್ಕಾಗಿ ನಡೆಸಿದ ಹೊರಾಟಗಳು ನನಗೆ ಸ್ಫೂರ್ತಿಯಾಗಿವೆ ಎಂದರು.

Write A Comment