ನವದೆಹಲಿ (ಪಿಟಿಐ): ಆಗಸ್ಟಾ ವೆಸ್ಟ್ಲ್ಯಾಂಡ್ ಹೆಲಿಕಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರನ್ನು ಬಂಧಿಸುವ ಶಕ್ತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ತಿಳಿಸಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಭ್ರಷ್ಟಾಚಾರದಲ್ಲಿ ಮೈತ್ರಿ ಮಾಡಿಕೊಂಡಿವೆ ಎಂದು ಕೇಜ್ರಿವಾಲ್ ಆರೋಪಿಸಿದರು.
ಆಗಸ್ಟಾ ವೆಸ್ಟ್ಲ್ಯಾಂಡ್ ಪ್ರಕರಣದಲ್ಲಿ ಸೋನಿಯಾಗಾಂಧಿ ಅವರನ್ನು ಮೋದಿಯವರು ಬಂಧಿಸುವುದಿಲ್ಲ! ಅದೇ ರೀತಿ ಸೋನಿಯಾಗಾಂಧಿ ಅವರು ಮೋದಿ ಅವರ ವಿದ್ಯಾರ್ಹತೆಯನ್ನು ಕೆದಕುವುದಿಲ್ಲ ಎಂದು ಕೇಜ್ರಿವಾಲ್ ವ್ಯಂಗ್ಯವಾಡಿದ್ದಾರೆ.
ಎರಡು ಪಕ್ಷಗಳು ಭ್ರಷ್ಟವಾಗಿವೆ. ಭ್ರಷ್ಟಚಾರದ ವಿರುದ್ಧ ಹೋರಾಡುವ ಧೈರ್ಯ ಇರುವುದು ಎಎಪಿ ಪಕ್ಷಕ್ಕೆ ಮಾತ್ರ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.
ರಾಷ್ಟ್ರೀಯ