ಉಜ್ಜಯಿನಿ: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ವಿವಾದಿತ ರಾಮಮಂದಿರ ನಿರ್ಮಾಣ ಕಾಮಗಾರಿ ನವೆಂಬರ್ 9ರಿಂದ ಆರಂಭವಾಗಲಿದೆ ಎಂದು ಸಾಧು-ಸಂತರ ತಂಡವೊಂದು ತಿಳಿಸಿದೆ.
ಪ್ರತಿ 12 ವರ್ಷಗಳಿಗೊಮ್ಮೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆಯುವ ಸಿಂಹಾಸ್ಥ ಕುಂಭಮೇಳ ಇದೇ ಎಪ್ರಿಲ್ 22ರಿಂದ ಆರಂಭವಾಗಿದ್ದು, ಈ ಸಂದರ್ಭದಲ್ಲಿ ರಾಮಮಂದಿರ ನಿರ್ಮಾಣ ಕಾಮಗಾರಿ ಕುರಿತ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಬಿಜೆಪಿ ನಾಯಕ, ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್ ಸ್ವಾಮಿ ಅವರು ಕೆಲವು ದಿನಗಳ ಹಿಂದಷ್ಟೇ ವರ್ಷಾಂತ್ಯಕ್ಕೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದರು.