ನವದೆಹಲಿ (ಪಿಟಿಐ): ತಮ್ಮ ವಿರುದ್ಧದ ಅನರ್ಹತೆ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ ಉತ್ತರಾಖಂಡದ ಒಂಬತ್ತು ಶಾಸಕರು ಸಲ್ಲಿಸಿದ್ದ ಅರ್ಜಿ ಸಂಬಂಧ ಮಧ್ಯಂತರ ಆದೇಶ ನೀಡಲು ಸುಪ್ರೀಂಕೋರ್ಟ್ ಸೋಮವಾರ ನಿರಾಕರಿಸಿದೆ.
ಇದರಿಂದ ಉತ್ತರಾಖಂಡ ವಿಧಾನಸಭೆಯಲ್ಲಿ ಮಂಗಳವಾರ(ಮೇ 10) ನಡೆಯಲಿರುವ ಬಹುಮತ ಸಾಬೀತು ಪರೀಕ್ಷೆಯ ವೇಳೆ ಮತ ಹಾಕುವ ಅಧಿಕಾರವನ್ನು ಅವರು ಕಳೆದುಕೊಂಡಿದ್ದಾರೆ.
ಮತ್ತೊಂದೆಡೆ, ಅರ್ಜಿ ವಿಚಾರಣೆಯ ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಜುಲೈ 12ಕ್ಕೆ ನಿಗದಿಪಡಿಸಿದೆ.
ರಾಷ್ಟ್ರೀಯ