ರಾಷ್ಟ್ರೀಯ

ಕಿರಣ್‌ ಬೇಡಿ ಪುದುಚೆರಿಯ ಗವರ್ನರ್‌

Pinterest LinkedIn Tumblr

isrooooನವದೆಹಲಿ: ಪುದುಚೆರಿಯ ಲೆಫ್ಟಿನೆಂಟ್ ಗವರ್ನರ್‌ ಹುದ್ದೆಗೆ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ನಾಯಕಿ ಕಿರಣ್ ಬೇಡಿ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಭಾನುವಾರ ಆದೇಶ ಹೊರಡಿಸಿದೆ.
ಈ ಬಗ್ಗೆ ಕೇಂದ್ರ ಸರ್ಕಾರ ಶಿಫಾರಸ್ಸು ಪತ್ರವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕಳುಹಿಸಿತ್ತು. ಕೇಂದ್ರ ಸರ್ಕಾರ ಕಳುಹಿಸಿದ್ದ ಶಿಫಾರಸ್ಸು ಪತ್ರಕ್ಕೆ ಅಂಕಿತ ಹಾಕಿದ್ದು, ಕಿರಣ್ ಬೇಡಿ ಅವರು ಪುದುಚೆರಿಯ ಲೆಫ್ಟಿನೆಂಟ್ ಗವರ್ನರ್‌ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಿರಣ್ ಬೇಡಿ ಅವರು ಬಿಜೆಪಿ ಸೇರಿದ್ದರು. ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಸಹ ಘೋಷಣೆ ಮಾಡಲಾಗಿತ್ತು.
ಕೇಂದ್ರ ಸರ್ಕಾರ ನನ್ನ ಮೇಲೆ ನಂಬಿಕೆ ಇಟ್ಟು ಈ ಗುರುತರ ಜವಾಬ್ದಾರಿ ವಹಿಸಿದೆ. ಇದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಕಿರಣ್‌ ಬೇಡಿ ಪ್ರತಿಕ್ರಿಯಿಸಿದ್ದಾರೆ.

Comments are closed.