ಜೈಪುರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ನಂತರ ಬೆಂಕಿ ಹಚ್ಚಿರುವ ದಾರುಣ ಘಟನೆ ರಾಜಸ್ತಾನದ ಶ್ರೀ ಗಂಗಾನಗರ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.
ಘಟನೆಯ ಪರಿಣಾಮ ಬಾಲಕಿಯ ದೇಹ ಶೇ. 75 ರಷ್ಟು ಭಾಗ ಸುಟ್ಟು ಹೋಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಮನೆಯಲ್ಲಿ ಪೋಷಕರು ಇಲ್ಲದ ವೇಳೆಗ ವಿಕ್ಕಿ ಮತ್ತು ಸೋನು ಹಾಗೂ ವಿಜಯ್ ಎಂಬುವರು ಆಕೆಯನ್ನು ಎತ್ತಿಕೊಂಡು ಹೋಗಿ ಆಕೆಯ ಮನೆಯ ಛಾವಣಿ ಮೇಲೆ ಗುರುವಾರ ರಾತ್ರಿ ಅತ್ಯಾಚಾರ ನಡೆಸಿದ್ದಾರೆ.
ಬಳಿಕ ಮನೆಯವರಿಗೆ ಈ ವಿಷಯ ತಿಳಿಸುತ್ತಾಳೆಂದು ಮನಗೊಂಡು ಶನಿವಾರ ಬೆಳಗ್ಗೆ ಬಾಲಕಿಯ ಮೇಲೆ ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಇದೀಗ ಆರೋಪಿ ವಿಕ್ಕಿಯನ್ನು ಬಂಧಿಸಿರುವ ಪೊಲೀಸರು ಮತ್ತಿಬ್ಬರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
Comments are closed.