ರಾಷ್ಟ್ರೀಯ

ದನದ ಶವ ವಿಲೇವಾರಿಗೆ ನಿರಾಕರಿಸಿದ ದಲಿತರ ಮೇಲೆ ಹಲ್ಲೆ ನಡೆಸಿದ ಆರು ಮಂದಿ ಬಂಧನ

Pinterest LinkedIn Tumblr

dalit

ಗುಜರಾತ್; ದನದ ಶವ ವಿಲೇವಾರಿ ಮಾಡಲು ನಿರಾಕರಿಸಿದ್ದಕ್ಕೆ ಗರ್ಭಿಣಿ ಮಹಿಳೆ ಸೇರಿದಂತೆ ದಲಿತ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿದ ಘಟನೆ ಗುಜರಾತ್ ನ ಬನ್ಸಾಕಾಂತಾ ಜಿಲ್ಲೆಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ದರ್ಬಾರ್ ಸಮುದಾಯಕ್ಕೆ ಸೇರಿದ್ದ ಸುಮಾರು 10 ಮಂದಿ ಏಕಾಏಕಿ ಮನೆನುಗ್ಗಿ ಹಲ್ಲೆ ನಡೆಸಿದ್ದು, ಈ ಸಂದರ್ಭದಲ್ಲಿ ತನ್ನ ಗರ್ಭಿಣಿ ಪತ್ನಿ ಸಂಗೀತಾ ಸೇರಿದಂತೆ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ದನದ ಶವವನ್ನು ವಿಲೇವಾರಿ ಮಾಡಲು ನಿರಾಕರಿಸಿದ್ದಕ್ಕೆ ಈ ಕೃತ್ಯ ಎಸಗಿರುವುದಾಗಿ ಹೇಳಲಾಗಿದೆ.

ಸಂಗೀತಾಳನ್ನು ಪಾಲಾನ್ಪುರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿಲೇಶ್ ಮತ್ತು ಉಳಿದವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ನಂತರ ಬಿಡುಗಡೆ ಮಾಡಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗೆ ಗುಜರಾತ್ ನಲ್ಲಿ ದನದ ಮಾಂಸ ಸುಲಿಯುತ್ತಿದ್ದರು ಎಂದು ಆರೋಪಿಸಿ ಯುವಕರ ಗುಂಪೊಂದು ತೀವ್ರ ಹಲ್ಲೆ ನಡೆಸಿದ್ದು ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ಆ ಘಟನೆ ಮಾಸುವ ಮುನ್ನವೇ ಮತ್ತೊಂದು ಅಂತಹ ಪ್ರಕರಣ ನಡೆದಿದೆ.

Comments are closed.