ನವದೆಹಲಿ: ಪಾಕಿಸ್ತಾನ ಗಡಿಯಲ್ಲಿ ಉಗ್ರ ನೆಲೆಗಳ ಮೇಲೆ ಸೀಮಿತ ದಾಳಿ ನಡೆಸಿದಂತೆಯೇ ಬಲೂಚಿಸ್ತಾನದಲ್ಲೂ ಭಾರತೀಯ ಸೇನೆ ಸೀಮಿತ ದಾಳಿ ನಡೆಸಬೇಕು ಎಂದು ಬಲೂಚಿಸ್ತಾನ ಸ್ವಾತಂತ್ರ್ಯ ಹೋರಾಟಗಾರ ದಿಲ್ಶಾದ್ ಬಲೂಚ್ ಅವರು ಗುರುವಾರ ಹೇಳಿದ್ದಾರೆ.
ಪಾಕಿಸ್ತಾನದ ಉನ್ನತ ಆಯೋಗದ ಮುಂದೆ ಪ್ರತಿಭಟನೆಗಿಳಿದಿದ್ದ ಅವರು, ಉಗ್ರರ ಕ್ಯಾಂಪ್ ಗಳ ಮೇಲೆ ಭಾರತೀಯ ಸೇನೆ ನಡೆಸುತ್ತಿರುವ ಸೀಮಿತ ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿದ್ದಾರೆ.
ಭಯೋತ್ಪಾದನೆ ವಿರುದ್ಧ ಭಾರತ ತೆಗೆದುಕೊಳ್ಳುತ್ತಿರುವ ನಿರ್ಧಾರ ಸರಿಯಿದೆ. ಪಾಕಿಸ್ತಾನ ಗಡಿಯಲ್ಲಿ ಉಗ್ರ ಕ್ಯಾಂಪ್ ಗಳ ಮೇಲೆ ಭಾರತೀಯ ಸೇನೆ ನಡೆಸುತ್ತಿರುವ ಸೀಮಿತ ದಾಳಿಯನ್ನು ಬಲೂಚಿಸ್ತಾನದಲ್ಲೂ ನಡೆಸಬೇಕಿದೆ. ಭಯೋತ್ಪಾದನಾ ಚಟುವಟಿಕೆಗಳಿಂದ ಬಲೂಚಿಸ್ತಾನ ಸ್ವತಂತ್ರಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಹಾಯ ಮಾಡಬೇಕು ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ
Comments are closed.