ರಾಷ್ಟ್ರೀಯ

ಆರ್ಎಸ್ಎಸ್ ವಿರುದ್ಧ ಮಾನಹಾನಿ ಮೊಕದ್ದಮೆ: ರಾಹುಲ್ ಗಾಂಧಿಗೆ ತಾತ್ಕಾಲಿಕ ಬಿಡುಗಡೆ

Pinterest LinkedIn Tumblr

rahulಗುವಾಹಟಿ: ಆರ್ಎಸ್ಎಸ್ ವಿರುದ್ಧ ಮಾನಹಾನಿ ಮೊಕದ್ದಮೆಗೆ ಸಂಬಂಧಿಸಿದಂತೆ ಗುವಾಹಟಿಯ ಸ್ಥಳೀಯ ನ್ಯಾಯಾಲಯ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ತಾತ್ಕಾಲಿಕ ಬಿಡುಗಡೆ ನೀಡಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಹುಲ್ ಗಾಂಧಿ ಇಂದು ತಮ್ಮ ವಕೀಲರೊಂದಿಗೆ ತೀವ್ರ ಭದ್ರತೆ ನಡುವೆ ಹಾಜರಾಗಿದ್ದರು. ಸಂಸದರಾಗಿರುವ ರಾಹುಲ್ ಗಾಂಧಿ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದನ್ನು ಪರಿಗಣಿಸಿ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಕಾಮ್ರೂಪ್, ವೈಯಕ್ತಿಕ ಮುಚ್ಚಳಿಕೆ ಪತ್ರಕ್ಕೆ ಸಹಿ ಹಾಕಿಸಿಕೊಂಡು ಪ್ರಕರಣದ ವಿಚಾರಣೆಯನ್ನು ನವೆಂಬರ್ 5ಕ್ಕೆ ಮುಂದೂಡಿದ್ದಾರೆ.
ನವೆಂಬರ್ 5ಕ್ಕೆ ಮತ್ತೆ ರಾಹುಲ್ ಗಾಂಧಿ ವೈಯಕ್ತಿಕವಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕಿದೆ ಎಂದು ಅವರ ಪರ ವಕೀಲ ಅಂಶುಮಾನ್ ಬೋರಾ ತಿಳಿಸಿದ್ದಾರೆ.

Comments are closed.