ರಾಷ್ಟ್ರೀಯ

ಸರ್ಜಿಕಲ್ ಕಾರ್ಯಾಚರಣೆ: ಮೋದಿಗೆ ಕೇಜ್ರಿವಾಲ್ ರಿಂದ ಅಭಿನಂದನೆ

Pinterest LinkedIn Tumblr

kejrival

ನವದೆಹಲಿ: ಪಾಕಿಸ್ತಾನ ಆಕ್ರಮಿತ ಉಗ್ರರ ನೆಲೆಗಳ ಮೇಲೆ ಸೀಮಿತ ದಾಳಿ ಮಾಡುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜತಾಂತ್ರಿಕ ನಿರ್ಧಾರವೊಂದನ್ನು ಕೈಗೊಂಡಿದ್ದಾರೆಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶುಕ್ರವಾರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಉರಿ ಸೆಕ್ಟರ್ ದಾಳಿಯಲ್ಲಿ 18 ಭಾರತೀಯ ಯೋಧರು ಹುತಾತ್ಮರಾಗಿದ್ದರು. ಇದಕ್ಕೆ ಪ್ರತಿಕಾರವಾಗಿ ನಮ್ಮ ಯೋಧರು ಉಗ್ರರ ನೆಲೆಗಳ ಮೇಲೆ ಮೇಲೆ ಸೀಮಿತ ದಾಳಿಯನ್ನು ಮಾಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ರಾಜತಾಂತ್ರಿಕ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ. ಕೇಂದ್ರ ಸರ್ಕಾರ ಮತ್ತು ಸೇನೆಗೆ ಬೆಂಬಲ ನೀಡುವುದು ದೇಶದಲ್ಲಿರುವ ಪ್ರತೀಯೊಬ್ಬ ನಾಗರೀಕ ಹಾಗೂ ಅಧಿಕಾರಿಗಳ ಪ್ರಮುಖ ಜವಾಬ್ದಾರಿಯಾಗಿರುತ್ತದೆ. ಕೇಂದ್ರ ಸರ್ಕಾರ, ಮೋದಿ ಹಾಗೂ ಭಾರತೀಯ ಸೇನೆಗೆ ಅಭಿನಂದನೆಗಳನ್ನು ಸಲ್ಲಿಸಲು ಇಚ್ಛಿಸುತ್ತೇನೆಂದು ಹೇಳಿದ್ದಾರೆ.

Comments are closed.