ರಾಷ್ಟ್ರೀಯ

ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ

Pinterest LinkedIn Tumblr

modi

ನವದೆಹಲಿ: ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಪ್ರಯುಕ್ತ ರಾಜ್‍ಘಾಟ್ ಮತ್ತು ವಿಜಯ್ ಘಾಟ್‍ಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮಹಾನ್ ನಾಯಕರಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ.

ಜಗತ್ತನ್ನು ಸುಂದರವಾಗಿಸಿದ ಮಹಾನ್ ವ್ಯಕ್ತಿ ಗಾಂಧೀಜಿ. ಅವರ ಧ್ಯೇಯ, ಸಮರ್ಪಣೆ ಮತ್ತು ಅಸಮಾನತೆಯ ವಿರುದ್ಧದ ಅವರ ಹೋರಾಟ ಎಲ್ಲರಿಗೂ ಸ್ಪೂರ್ತಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ದೇಶ ಕಂಡ ಧೀರ ನಾಯಕ ಶಾಸ್ತ್ರಿಯವರು ಎಂದು ಹೇಳಿರುವ ಮೋದಿ ವಿಜಯ್ ಘಾಟ್ ನಲ್ಲಿ ಪುಷ್ಪ ನಮನ ಸಲ್ಲಿಸುತ್ತಿರುವ ಚಿತ್ರವನ್ನು ಮೋದಿ ಟ್ವೀಟ್ ಮಾಡಿದ್ದಾರೆ.

ಅದೇ ವೇಳೆ ಗಾಂಧಿ ಜಯಂತಿ ಸಂದರ್ಭದಲ್ಲಿ ವಿವಿಧೆಡೆಯಲ್ಲಿ ನಡೆಯುತ್ತಿರುವ ಸ್ವಚ್ಛತಾ ಕಾರ್ಯಕ್ರಮ (ಶ್ರಮ್‍ದಾನ್ )ಜ ವಿಡಿಯೊವನ್ನು ಮೋದಿಯವರು ಟ್ವಿಟರ್ ನಲ್ಲಿ ಶೇರ್ ಮಾಡಿದ್ದಾರೆ.

Comments are closed.