ರಾಷ್ಟ್ರೀಯ

ಕೇಜ್ರಿವಾಲ್‌ ನ ಕಿವಿ ಹಿಂಡಿದ ಅಣ್ಣಾ ! ಏಕೆ ಎಂಬುದು ಮುಂದಿದೆ ಓದಿ…

Pinterest LinkedIn Tumblr

INDIA-CORRUPTION/PROTESTS

ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಪುರಾವೆ ನೀಡುವಂತೆ ಆಗ್ರಹಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಅಣ್ಣಾ ಹಜಾರೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಭಾರತೀಯ ಸೇನೆ ವಿರುದ್ಧದ ಕೇಜ್ರಿವಾಲ್ ಅವರ ವಿವಾದಾತ್ಮಕ ಹೇಳಿಕೆಯನ್ನು ಅಣ್ಣಾ ಹಜಾರೆ ತೀವ್ರವಾಗಿ ಖಂಡಿಸಿದ್ದು, ಸೇನೆ ಮೇಲೆ ಯಾರು ಅನುಮಾನ ಪಡುವುದಿಲ್ಲ. ಭಾರತೀಯ ಸೇನೆಯ ಮೇಲೆ ಮಕ್ಕಳಿಂದ ಹಿರಿಯರವರೆಗೆ ಗೌರವ ಮತ್ತು ಭರವಸೆ ಇದೆ ಎಂದು ಹೇಳಿದ್ದಾರೆ.

ಕಳೆದ ವಾರ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿದ ಭಾರತೀಯ ಸೇನೆ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು. ಸೀಮಿತ ದಾಳಿಯಲ್ಲಿ 7 ಉಗ್ರರ ಶಿಬಿರವನ್ನು ದ್ವಂಸಗೊಳಿಸಿದ್ದರು. ಈ ದಾಳಿಯಲ್ಲಿ ಸುಮಾರು 40 ಉಗ್ರರನ್ನು ಸೇನೆ ಹತ್ಯೆಗೈದಿತ್ತು. ಈ ಬಗ್ಗೆ ಪುರಾವೆ ಒದಗಿಸಬೇಕು ಎಂದು ಕೇಜ್ರಿವಾಲ್ ಪ್ರಧಾನಿಯನ್ನು ಒತ್ತಾಯಿಸಿದ್ದು ಕೇಜ್ರಿ ಅವರ ಈ ವಿವಾದಾತ್ಮಕ ಹೇಳಿಕೆಯಿಂದ ದೇಶ-ವಿದೇಶಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

Comments are closed.