ರಾಷ್ಟ್ರೀಯ

ರಾಹುಲ್ ಗಾಂಧಿ ವಿರುದ್ಧ ದೂರು ದಾಖಲು

Pinterest LinkedIn Tumblr

rahul-modi-759ಚಂದೋಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ರಕ್ತದ ದಲ್ಲಾಳಿ ಎಂದು ಟೀಕಿಸಿದ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಚಾಂದೋಲಿ ಕೋರ್ಟ್‌ನಲ್ಲಿ ದೂರು ದಾಖಲಿಸಲಾಗಿದೆ.

ಏತನ್ಮಧ್ಯೆ, ಬಿಜೆಪಿ ಯುವ ಮೋರ್ಚಾ ಲಕ್ನೋದಲ್ಲಿ ರಾಹುಲ್ ಗಾಂಧಿ ವಿರುದ್ಧ ಭಾರಿ ಪ್ರತಿಭಟನೆ ಆರಂಭಿಸಿದೆ

ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರೆ, ಬಿಜೆಪಿ ರಾಹುಲ್ ಸೀಮಿತ ದಾಳಿ ಬಗ್ಗೆ ಹೇಳಿಕೆ ನೀಡಿ ಪಾಕಿಸ್ತಾನವನ್ನು ಬೆಂಬಲಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದೆ.

ಪಾಕ್ ಆಕ್ರಮಿತ ಕಾಶ್ಮಿರದಲ್ಲಿ ನಡೆದ ಬಾರತೀಯ ಸೇನೆಯ ಸೀಮಿತ ದಾಳಿಯನ್ನು ಬೆಂಬಲಿಸದ ಕಾಂಗ್ರೆಸ್ ಪರೋಕ್ಷವಾಗಿ ಪಾಕಿಸ್ತಾನದ ಪರ ವಕಾಲತ್ತು ನಡೆಸಿದೆ ಎಂದು ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಮೋದಿಯವರನ್ನು ರಕ್ತದ ದಲ್ಲಾಳಿ ಎಂದು ಟೀಕಿಸಿದ ರಾಹುಲ್ ಗಾಂಧಿ, ದೇಶದ ಸೈನಿಕರಿಗೆ ಮತ್ತು 125 ಕೋಟಿ ಜನತೆಗೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಕ್ರೋಷ ವ್ಯಕ್ತಪಡಿಸಿದ್ದಾರೆ.

Comments are closed.