ರಾಷ್ಟ್ರೀಯ

ಮಾಯಾವತಿ ರ‍್ಯಾಲಿಯಲ್ಲಿ ನೂಕುನುಗ್ಗಲು: ಇಬ್ಬರು ಮಹಿಳೆಯರ ಸಾವು

Pinterest LinkedIn Tumblr

mayaಲಕ್ನೊ: ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ರ್ಯಾಲಿಯಲ್ಲಿ ನೂಕುನುಗ್ಗಲು ಉಂಟಾಗಿ ಇಬ್ಬರು ಮಹಿಳೆಯರು ಮೃತಪಟ್ಟು, 12 ಮಂದಿ ಗಾಯಗೊಂಡ ಘಟನೆ ಭಾನುವಾರ ಜರುಗಿದೆ.

ಇಲ್ಲಿನ ಕಾನ್ಷಿರಾಂ ಮೈದಾನದಲ್ಲಿ ಪಕ್ಷದ ಸಂಸ್ಥಾಪಕ ಕಾನ್ಷಿರಾಂ ಅವರ 10ನೇ ಸಂಸ್ಮರಣೆ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ಸಾವಿರಾರು ಜನ ಸೇರಿದ್ದರು. ಈ ವೇಳೆ ಎರಡು ಗೇಟ್‌ಗಳಲ್ಲಿ ನೂಕುನುಗ್ಗಲು ಉಂಟಾಗಿ, ಮೆಟ್ಟಿಲಿನಿಂದ ಜಾರಿ ಬಿದ್ದ ಇಬ್ಬರು ಮಹಿಳೆಯರು ಕಾಲ್ತುಳಿತಕ್ಕೆ ಸಾವಿಗೀಡಾಗಿದ್ದಾರೆ.

ಮೈದಾನದಲ್ಲಿ ವಿದ್ಯುತ್‌ ತಂತಿ ಕೆಳಕ್ಕೆ ಬಿದ್ದಿದೆ ಎಂದು ವದಂತಿ ಹಬ್ಬಿದ್ದರಿಂದ ನೂಕುನುಗ್ಗಲು ಉಂಟಾಗಿದೆ. ಎರಡು ಗೇಟ್‌ಗಳ ಬಳಿ ಉಂಟಾಗಿದ್ದ ನೂಕುನುಗ್ಗಲಿನಲ್ಲಿ ಮೆಟ್ಟಿಲು ಇಳಿಯುವಾಗ ಕಾಲುಜಾರಿ ಬಿದ್ದ ಇಬ್ಬರು ಮಹಿಳೆಯರು ಸಾವಿಗೀಡಾಗಿದ್ದಾರೆ. ಬಿಜನೂರ್‌ನ ಶಾಂತಿ ದೇವಿ(68) ಮೃತಪಟ್ಟಿದ್ದಾರೆ. ಇನ್ನೊಬ್ಬ ಮಹಿಳೆಯ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯುತ್‌ ತಂತಿ ಬಿದ್ದಿದೆ ಎಂಬ ವದಂತಿ ಹಬ್ಬಿದ್ದರಿಂದ ನೂಕುನುಗ್ಗಲು ಉಂಟಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.

Comments are closed.