ವಾರಣಾಸಿ: ಜೈ ಗುರುದೇವ ಅಧ್ಯಾತ್ಮಿಕ ಸಭಾ ಕಾರ್ಯಕ್ರಮ ವೇಳೆ ಕಾಲ್ತುಳಿತದಿಂದ 14 ಮಹಿಳೆಯರು, ನಾಲ್ವರು ಪುರುಷರು ಸೇರಿದಂತೆ 24 ಮಂದಿ ಸಾವಿಗೀಡಾಗಿ, ಹಲವು ಮಂದಿ ಗಾಯಗೊಂಡ ಘಟನೆ ಶನಿವಾರ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಂಭವಿಸಿದೆ.
ಅಧ್ಯಾತ್ಮಿಕ ಸಭಾ ಕಾರ್ಯಕ್ರಮಕ್ಕೆ ನೂರಾರು ಭಕ್ತರು ಭಾಗವಹಿಸಿದ್ದರು. ವಾರಣಾಸಿ –ಚಂದೋಲಿ ಜಿಲ್ಲೆ ನಡುವಿನ ರಾಜ್ಘಾಟ್ ಸೇತುವೆ ಬಳಿ ಕಾಲ್ತುಳಿತ ಸಂಭವಿಸಿದೆ.
14 ಮಹಿಳೆಯರು, ನಾಲ್ವರು ಪುರುಷರು ಸೇರಿ ಒಟ್ಟು 24 ಮಂದಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಗಾಯಾಳುಗಳನ್ನು ರಕ್ಷಿಸುವ ಕಾರ್ಯ ನಡೆದಿದ್ದು, ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ನೂಕು ನುಗ್ಗಲು ಉಂಟಾಗಿ ಬಟ್ಟೆ, ಚಪ್ಪಲಿ ಹಾಗೂ ವಸ್ತುಗಳು ಚಲ್ಲಾಪಿಲ್ಲಿಯಾಗಿ ಬಿದ್ದಿವೆ.
ಪರಿಹಾರ ಘೋಷಣೆ: ಘಟನೆಯಲ್ಲಿ ಮೃತಪಟ್ಟವ ಕುಟುಂಬಕ್ಕೆ ತಲಾ ₹ 2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ ₹ 50 ಸಾವಿರ ಪರಿಹಾರ ನೀಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಘೋಷಿಸಿದ್ದಾರೆ.
Comments are closed.