ರಾಷ್ಟ್ರೀಯ

ಹೆಚ್ಚು ಮಕ್ಕಳನ್ನು ಹೆರುವ ಮೂಲಕ ಹಿಂದೂಗಳು ತಮ್ಮ ಜನಸಂಖ್ಯೆಯನ್ನು ಹೆಚ್ಚಿಸಿಕೊಳ್ಳಿ: ಕೆಂದ್ರ ಸಚಿವ ಗಿರಿರಾಜ್ ಸಿಂಗ್

Pinterest LinkedIn Tumblr

Giriraj-Singhಪಾಟ್ನಾ: ಹೆಚ್ಚು ಹೆಚ್ಚು ಮಕ್ಕಳನ್ನು ಹೆರುವ ಮೂಲಕ ಹಿಂದೂಗಳು ತಮ್ಮ ಜನಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವ ನಿರ್ಧಾರವನ್ನು ಕೈಗೊಳ್ಳಬೇಕು ಎಂದು ಕೆಂದ್ರ ಸಚಿವ ಗಿರಿರಾಜ್ ಸಿಂಗ್ ಸೋಮವಾರ ಹೇಳಿದ್ದಾರೆ.

ದೇಶದಲ್ಲಿ ಮುಸ್ಲಿಮರ ಜನಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದುದರಿಂದ ಈ ಬಗ್ಗೆ ಹಿಂದೂಗಳು ಗಂಭೀರವಾಗಿ ಚಿಂತಿಸಬೇಕು. ಮಾತ್ರವಲ್ಲದೇ ಹೆಚ್ಚು ಹೆಚ್ಚು ಮಕ್ಕಳನ್ನು ಹೇರುವ ಮೂಲಕ ಭಾರದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಬೇಕು ಎಂಬುವುದಾಗಿ ಸಲಹೆಯನ್ನು ನೀಡಿದ್ದಾರೆ.

ಕಳೆದ ಆಗಸ್ಟ್ ನಲ್ಲಷ್ಟೇ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೂಡ ದೇಶದಲ್ಲಿ ಹಿಂದೂ ಕುಟುಂಬಗಳು ಹೆಚ್ಚು ಮಕ್ಕಳನ್ನು ಹೆರಬೇಕು ಎಂದು ಸೂಚನೆ ನೀಡಿದ್ದರು.

1947ರಲ್ಲಿ ಟೈಮ್ಸ್ ಆಫ್ ಇಂಡಿಯಾ ಸಮೀಕ್ಷೆ ನಡೆಸಿದಾಗ ಶೇ 10ರಷ್ಟಿದ್ದ ಮುಸ್ಲಿಂ ಸಮುದಾಯದ ಜನಸಂಖ್ಯೆ ಇದೀಗ ಶೇ.24 ರಷ್ಟು ಏರಿಕೆಯಾಗಿದೆ. ಆದರೆ ಅಂದಿಗಿಂತ ಇಂದು ಹಿಂದೂ ಸಮುದಾಯದ ಜನಸಂಖ್ಯೆ ಶೆ.90ರಷ್ಟು ಕಡಿಮೆಯಾಗಿದೆ ಎಂದು ಅವರು ತಿಳಿಸಿದರು.

ಗಿರಿರಾಜ್ ಸಿಂಗ್ ಅವರು ಬಿಹಾರದ ನಾವಾಡ ಕ್ಷೇತ್ರದ ಲೋಕಸಭಾ ಸದಸ್ಯರಾಗಿರುತ್ತಾರೆ.

Comments are closed.