ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಚೇತರಿಸಿಕೊಂಡಿದ್ದು ಶೀಘ್ರದಲ್ಲೇ ಮನೆಗೆ ಮರುಳುತ್ತಾರೆ ಎಂದು ಎಐಎಡಿಎಂಕೆ ಪಕ್ಷ ಹೇಳಿದೆ.
ಅವರು ಚೇತರಿಸಿಕೊಳ್ಳುತ್ತಿದ್ದಾರೆ. ದೇವರ ಕೃಪೆ ಅವರಿಗಿದೆ, ಶೀಘ್ರದಲ್ಲೇ ಅವರು ಮನೆಗೆ ಮರಳಲಿದ್ದಾರೆ ಎಂದು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಎಐಎಡಿಎಂಕೆ ಪಕ್ಷದ ವಕ್ತಾರ ಸಿ. ಆರ್ ಸರಸ್ವತಿ ಹೇಳಿದ್ದಾರೆ.
ಪಕ್ಷದ ಕಾರ್ಯಕರ್ತರು ಅಮ್ಮನಿಗಾಗಿ ಮಾಡಿದ ಪ್ರಾರ್ಥನೆ ಫಲಿಸಿದೆ. ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಮ್ಮ ಈಗ ಗುಣಮುಖವಾಗುತ್ತಿದ್ದಾರೆ, ಅದಕ್ಕಾಗಿ ನಾವು ಆಸ್ಪತ್ರೆಯ ಸಿಬ್ಬಂದಿ ಮತ್ತು ಏಮ್ಸ್, ಸಿಂಗಾಪುರದ ತಜ್ಞ ವೈದ್ಯರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇವೆ ಎಂದು ಸರಸ್ವತಿ ಹೇಳಿದ್ದಾರೆ.
ನಿರ್ಜಲೀಕರಣ ಮತ್ತು ಜ್ವರದಿಂದ ಬಳಲುತ್ತಿದ್ದ ಜಯಲಲಿತಾ ಅವರನ್ನು ಸೆಪ್ಟೆಂಬರ್ 22 ರಂದು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Comments are closed.