ರಾಷ್ಟ್ರೀಯ

ಪ್ರೀತಿಸಲು ಒಪ್ಪದ ವಿದ್ಯಾರ್ಥಿನಿಯನ್ನು ಬಸ್‌ನಲ್ಲಿ ಕೂಡಿಹಾಕಿ ಚಾಕುವಿನಿಂದ ಮನಬಂದಂತೆ ತಿವಿದು ಕೊಂದ ಹಂತಕ

Pinterest LinkedIn Tumblr

knif

ಭೋಪಾಲ್: ಆಘಾತಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ಬಸ್‌ನಲ್ಲಿದ್ದ ವಿದ್ಯಾರ್ಥಿನಿಯನ್ನು ಎಳೆದುಕೊಂಡು ಹೋಗಿ ಚಾಕುವಿನಿಂದ ಮನಬಂದಂತೆ ತಿವಿದು ಹತ್ಯೆ ಮಾಡಿದ ಭೀಕರ ಘಟನೆ ಮಧ್ಯಪ್ರದೇಶದಲ್ಲಿ ವರದಿಯಾಗಿದೆ.

ಆರೋಪಿಯಿಂದ ಬಾಲಕಿಯನ್ನು ಉಳಿಸಲು ಬಸ್ ಚಾಲಕ ಪ್ರಯತ್ನಿಸಿದನಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಆದರೆ, ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಕಾಲೇಜು ವಿದ್ಯಾರ್ಥಿನಿಯಾದ ಸಂಜು ಸಿಂಗ್ ದೀಪಾವಳಿ ಹಬ್ಬಕ್ಕಾಗಿ ಗ್ರಾಮಕ್ಕೆ ತೆರಳುತ್ತಿದ್ದಳು ಎನ್ನಲಾಗಿದೆ. ಆರೋಪಿ ಶಿವೇಂದ್ರ ಸಿಂಗ್, ಗೋತ್ರಾ ಗ್ರಾಮದ ಬಳಿ ಬಸ್ ನಿಲ್ಲಿಸಿ, ಬಸ್‌ನೊಳಗೆ ಪೆಟ್ರೋಲ್ ಸುರಿದು ಬಸ್‌ಗೆ ಬೆಂಕಿ ಹಚ್ಚುವ ಬೆದರಿಕೆಯೊಡ್ಡಿದಾಗ ಗಾಬರಿಗೊಂಡ ಪ್ರಯಾಣಿಕರು ಬಸ್‌‌ನಿಂದ ಇಳಿದಿದ್ದಾರೆ.

ಬಾಲಕಿ ಸಂಜು ಸಿಂಗ್‌ಳನ್ನು ಬಸ್‌ನಿಂದ ಒತ್ತಾಯಪೂರ್ವಕವಾಗಿ ಕೆಳಗಿಳಿಸಿ ನಂತರ ಚಾಕುವನಿಂದ ಮನಬಂದಂತೆ ತಿವಿದಿದ್ದಾನೆ. ಬಾಲಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ. ಈದೇ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ್ದ ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿ ಶಿವೇಂದ್ರ ಸಿಂಗ್ ಬಾಲಕಿಯನ್ನು ಪ್ರೀತಿಸುತ್ತಿದ್ದನು ಎನ್ನಲಾಗಿದೆ. ಆದರೆ, ಬಾಲಕಿ ಆತನನ್ನು ಪ್ರೀತಿಸುತ್ತಿರಲಿಲ್ಲವಾದ್ದರಿಂದ ಹತ್ಯೆ ಮಾಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Comments are closed.