ರಾಷ್ಟ್ರೀಯ

2ನೇ ಮದುವೆ ನಂತರ ಮಾನಸಿಕ ಸ್ಥಿಮಿತ ಕಳೆದುಕೊಂಡ ದಿಗ್ವಿಜಯ್ ಸಿಂಗ್: ಸ್ವಾಮಿ

Pinterest LinkedIn Tumblr

Dr. subrahmanya_swami_2ನವದೆಹಲಿ: ಭೋಪಾಲ್ ನಲ್ಲಿ ನಡೆದಿರುವ ಉಗ್ರರ ಎನ್ ಕೌಂಟರ್ ನ್ನು ಪ್ರಶ್ನಿಸಿರುವ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ, ಎರಡನೇ ಮದುವೆಯಾದ ಬಳಿಕ ದಿಗ್ವಿಜಯ್ ಸಿಂಗ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ (ಮತಿಭ್ರಮಣೆ) ಎಂದು ಲೇವಡಿ ಮಾಡಿದ್ದಾರೆ.
ಎರಡನೇ ವಿವಾಹವಾದ ಬಳಿಕ ದಿಗ್ವಿಜಯ್ ಸಿಂಗ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ, ಆದ್ದರಿಂದ ಅವರ ಹಾಸ್ಯಾಸ್ಪದ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡುವುದು ವಿಷಯಗಳನ್ನು ಮತ್ತಷ್ಟು ಉಲ್ಬಣಗೊಳಿಸುತ್ತದೆ ಎಂದು ಸುಬ್ರಹ್ಮಣಿಯನ್ ಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಈ ಹಿಂದೆಯೂ ಸಾಕಷ್ಟು ತಪ್ಪು, ಹಾಸ್ಯಾಸ್ಪದ ಹೇಳಿಕೆಗಳನ್ನು ನೀಡಿದ್ದಾರೆ. ಎರಡನೇ ಮದುವೆಯಾದ ಬಳಿಕ ದಿಗ್ವಿಜಯ್ ಸಿಂಗ್ ಮಾನಸಿಕ ಸ್ಥಿಮಿತ ಕಳೆದುಕೊಂಡಂತಿದೆ ಎಂದು ಸ್ವಾಮಿ ವ್ಯಂಗ್ಯವಾಡಿದ್ದಾರೆ. ಮಧ್ಯಪ್ರದೇಶದ ಭೋಪಾಲ್ ನಲ್ಲಿ ಸಿಮಿ ಉಗ್ರರು ತಪ್ಪಿಸಿಕೊಂಡಿದ್ದರ ಹಿಂದೆ ಷಡ್ಯಂತ್ರ ಇದೆ ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅನುಮಾನ ವ್ಯಕ್ತಪಡಿಸಿದ್ದರು.

Comments are closed.