ರಾಷ್ಟ್ರೀಯ

ಸೆಲ್ಫಿಗಾಗಿ ಪ್ರಾಣ ಕಳೆದುಕೊಂಡ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು

Pinterest LinkedIn Tumblr

selfyಹೈದರಾಬಾದ್: ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ದಾರುಣ ಘಟನೆ ತೆಲಂಗಾಣದ ಕಮ್ಮಮ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.
ಕಮ್ಮಮ್ ಜಿಲ್ಲೆಯ ನಾಗಾರ್ಜನ ಸಾಗರದ ಕಾಲುವೆ ಬಳಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಇಬ್ಬರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವಿದ್ಯಾರ್ಥಿಗಳು ಸೆಲ್ಫಿ ತೆಗೆದುಕೊಳ್ಳುವುದಕ್ಕಾಗಿ ಕಾಲುವೆಗೆ ಇಳಿದಿದ್ದರು. ನೀರಿನ ಸೆಳೆತ ಜೋರಾಗಿದ್ದರಿಂದ ನಿಯಂತ್ರಣ ತಪ್ಪಿ ಕಾಲುವೆಗೆ ಬಿದಿದ್ದಾರೆ ಎಂದು ಅವರು ಸ್ನೇಹಿತಿರು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ನೀರುಪಾಲಾದ ವಿದ್ಯಾರ್ಥಿಗಳನ್ನು 21 ವರ್ಷದ ಪರಮೇಶ್ವರ ರೆಡ್ಡಿ ಹಾಗೂ 20 ವರ್ಷದ ನಾಗಾರ್ಜುನ ಎಂದು ಗುರುತಿಸಲಾಗಿದೆ. ಈ ಇಬ್ಬರು ವಿದ್ಯಾರ್ಥಿಗಳು ಕಮ್ಮಮ್ ನ ಖಾಸಗಿ ಕಾಲೇಜ್ ನಲ್ಲಿ ಬಿ.ಟೆಕ್ ಮಾಡುತ್ತಿದ್ದರು ಎನ್ನಲಾಗಿದೆ.

Comments are closed.