ಶ್ರೀನಗರ: ಪಾಕಿಸ್ತಾನ ಸೇನೆ ಶನಿವಾರ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕ್ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.
ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೆರನ್ ಸೆಕ್ಟರ್ ನಲ್ಲಿ ಸೇನಾ ಶಿಬಿರವನ್ನು ಗುರಿಯಾಗಿಸಿಕೊಂಡು ಪಾಕ್ ನಡೆದಿಸಿದ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೆರನ್ ಸೆಕ್ಟರ್ ಮೇಲೆ ಪಾಕ್ ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗು ಹೇಳಿದ್ದಾರೆ.
ಹುತಾತ್ಮ ಯೋಧ ಹರ್ಶಿದ್ ಬದರಾಯ್ ಎಂದು ಗುರುತಿಸಲಾಗಿದೆ. ಸದ್ಯ ಗುಂಡಿನ ದಾಳಿ ಸ್ಥಗಿತಗೊಂಡಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ರಾಷ್ಟ್ರೀಯ
Comments are closed.