ನವದೆಹಲಿ: ಬ್ಯಾಂಕುಗಳಲ್ಲಿ ಸಾಕಷ್ಟು ಹಣವಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಭಾನುವಾರ ಹೇಳಿದೆ.
ದೇಶದಲ್ಲಿ ನೋಟಿನ ಅಭಾವ ಎದುರಾಗಿದೆ ಎಂಬ ಸುದ್ದಿ ಕುರಿತಂತೆ ಸ್ಪಷ್ಟನೆ ನೀಡಿರುವ ಆರ್’ಬಿಐ ಅಧಿಕಾರಿಗಳು, ಬ್ಯಾಂಕುಗಳಲ್ಲಿ ಈಗಾಗಲೇ ಸಾಕಷ್ಟು ಹಣವಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಅಗತ್ಯಬಿದ್ದಾಗ ಜನರು ಬ್ಯಾಂಕುಗಳಲ್ಲಿ ಹಣವನ್ನು ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಆರ್”ಬಿಐ ಹೇಳಿಕೆಯೊಂದನ್ನು ನೀಡಿತ್ತು, ಕೇಂದ್ರ ಸರ್ಕಾರ ದಿಢೀರ್ ನಿರ್ಧಾರದಿಂದಾಗಿ ಬ್ಯಾಂಕುಗಳು ಸಂಕಷ್ಟಕ್ಕೆ ಸಿಲುಕಿದ್ದು, ನೋಟಿನ ಅಭಾವ ಹೆಚ್ಚಾಗಿದೆ ಎಂದು ಹೇಳಿತ್ತು. ಆರ್’ಬಿಐನ ಈ ಹೇಳಿಕೆಗೆ ಜನರು ಆಕ್ರೋಶವನ್ನು ವ್ಯಕ್ತಪಡಿಸಲು ಆರಂಭಿಸಿದ್ದರು. ಈ ಹಿನ್ನೆಲೆಯಲ್ಲಿ ಆರ್’ಬಿಐ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ರಾಷ್ಟ್ರೀಯ
Comments are closed.