ರಾಷ್ಟ್ರೀಯ

ನೋಟು ನಿಷೇಧ: ಮಮತಾ ಬ್ಯಾನರ್ಜಿ ಬೆಂಬಲಕ್ಕೆ ನಿಂತ ಶಿವಸೇನೆ!

Pinterest LinkedIn Tumblr

Mamata_PTIaನವದೆಹಲಿ (ನ.15): ನೋಟು ನಿಷೇಧವನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ನಾಳೆ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿ ಮೆರವಣಿಗೆ ನಡೆಸಲಿದ್ದಾರೆ.
ಅಚ್ಚರಿ ಸಂಗತಿಯೆಂದರೆ ಮಮತಾರವರಿಗೆ ಕಾಂಗ್ರೆಸ್ ಪಕ್ಷ ಬೆಂಬಲ ನೀಡುತ್ತಿಲ್ಲ. ಬಿಜೆಪಿ ಮೈತ್ರಿ ಪಕ್ಷವಾದ ಶಿವಸೇನೆ ಬೆಂಬಲ ನೀಡುತ್ತಿದೆ. ಪ್ರಧಾನಿ ಮೋದಿಯವರ ಈ ನಿರ್ಧಾರದಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಹಾಗಾಗಿ ನಾವು ಮಮತಾರವರಿಗೆ ಬೆಂಬಲ ನೀಡುತ್ತಿದ್ದೇವೆ. ಈ ಸಂಬಂಧ ಮಾತುಕತೆ ನಡೆಸಲು ಶಿವಸೇನೆ ಮಮತಾ ಬ್ಯಾನರ್ಜಿಯವರನ್ನು ಭೇಟಿ ಮಾಡಲಿದೆ. ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯವರನ್ನು ಬರ ಹೇಳಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Comments are closed.