ಶ್ರೀನಗರ: ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಸೇನಾಯೋಧರು ಇಬ್ಬರು ಉಗ್ರರನ್ನು ಹತ್ಯೆ ಮಾಡಿ, ₹2000 ಮುಖ ಬೆಲೆಯ ನೋಟು ಸೇರಿದಂತೆ ಅಪಾರ ಪ್ರಮಾಣದ ಮದ್ದು ಗುಂಡುಗಳನ್ನು ಮಂಗಳವಾರ ವಶಪಡಿಸಿಕೊಂಡಿದ್ದಾರೆ.
ನೋಟು ನಿಷೇಧದ ಬಳಿಕ ಉಗ್ರರ ಆರ್ಥಿಕ ವಹಿವಾಟಿಗೆ ಕಡಿವಾಣ ಹಾಕಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿರುವ ಬೆನ್ನಲ್ಲೇ ಉಗ್ರರ ಬಳಿ ₹ 2000 ಮುಖಬೆಲೆಯ ನೋಟುಗಳು ಪತ್ತೆಯಾಗಿವೆ.
ಮಂಗಳವಾರ ಬೆಳಗ್ಗೆ ಉತ್ತರ ಕಾಶ್ಮೀರದ ಬಂಡಿಪೋರ್ ಜಿಲ್ಲೆಯಲ್ಲಿ ಸೇನಾ ಯೋಧರು ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ.
ಉಗ್ರರು ಮತ್ತು ಯೋಧರ ನಡುವೆ ಸುಮಾರು ಎರಡು ತಾಸುಗಳಿಗೂ ಹೆಚ್ಚು ಹೊತ್ತು ಗುಂಡಿನ ಚಕಮಕಿ ನಡೆದಿದೆ. ಅಂತಿಮವಾಗಿ ಉಗ್ರರನ್ನು ಹೊಡೆದುರುಳಿಸಲಾಯಿತು ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.
₹ 2000 ಮುಖ ಬೆಲೆಯ ಎರಡು ನೋಟುಗಳು ಸೇರಿದಂತೆ ₹15 ಸಾವಿರ ನಗದು ಹಾಗೂ ಅಪಾರ ಪ್ರಮಾಣದ ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
Comments are closed.