ಮಧುರೈ: ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ದೇಶದ ಇಪ್ಪತ್ತಕ್ಕೂ ಹೆಚ್ಚು ರಾಜಕೀಯ ಮುಖಂಡರ ಹತ್ಯೆಗೆ ಸಂಚು ರೂಪಿಸಿದ್ದ ಅಲ್ಖೈದಾ ಉಗ್ರ ಸಂಘಟನೆಯ ಮೂವರು ಉಗ್ರರನ್ನು ತಮಿಳುನಾಡಿನ ಮಧುರೈನಲ್ಲಿ ಬಂಧಿಸಲಾಗಿದೆ.
ಐವರು ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಜಂಟಿ ಕಾರ್ಯಾಚರಣೆ ಆರಂಭಿಸಿದ ಎನ್ಐಎ ಹಾಗೂ ತಮಿಳುನಾಡು ಪೊಲೀಸರು ಮೂರು ಮಂದಿ ಉಗ್ರರನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಆಯೂಬ್, ಅಬ್ಬಾಸ್ ಅಲಿ ಹಾಗೂ ಕರೀಂ ಸೆರೆ ಸಿಕ್ಕಿರುವ ಉಗ್ರರು. ತಲೆ ಮರೆಸಿಕೊಂಡಿರುವ ಉಳಿದ ಇಬ್ಬರು ಉಗ್ರರಾದ ಹಕೀಂ ಮತ್ತು ಸುಲೇಮಾನ್ಗಾಗಿ ತೀವ್ರ ಶೋಧ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಿಂದೆ ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಅವರ ಚುನಾವಣಾ ರ್ಯಾಲಿ ಸಂದರ್ಭದಲ್ಲಿ ಎರಡು ಬಾರಿ ಬಾಂಬ್ ದಾಳಿ ಮಾಡಿದ್ದ ಉಗ್ರರ ಈ ಗುಂಪು ದೇಶದ ಪ್ರಮುಖ ನಾಯಕರ ಹತ್ಯೆಗೆ ಸಂಚು ರೂಪಿಸಿತ್ತು ಎಂದು ತಿಳಿದು ಬಂದಿದೆ.
Comments are closed.