ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಶನಿವಾರ ಮತ್ತೆ ಅಟ್ಟಹಾಸ ಮೆರೆದಿದ್ದು, ಪ್ಯಾಂಪೊರೆಯ ಶ್ರೀನಗರ- ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ.
ಇಂದು ಮಧ್ಯಾಹ್ನ ಪುಲ್ವಂ ಜಿಲ್ಲೆಯ ಪ್ಯಾಂಪೊರೆಯ ಕದ್ಲಬಾಲ್ ನಲ್ಲಿ ಸೇನಾ ಕಾವಲುಪಡೆಯ ಮೇಲೆ ಉಗ್ರರು ದಾಳಿ ನಡೆಸಿದ್ದು, ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಡಗಿರುವ ಉಗ್ರರನ್ನು ಹೊಡೆದುರುಳಿಸಲು ಭದ್ರತಾ ಸಿಬ್ಬಂದಿ ವಸತಿ ಪ್ರದೇಶವನ್ನು ಸಂಪೂರ್ಣ ಸುತ್ತುವರೆದಿದ್ದಾರೆ.
Comments are closed.