ರಾಷ್ಟ್ರೀಯ

ಬಿಜೆಪಿಗೆ ಮತ ನೀಡದಂತೆ ಕೇಜ್ರಿವಾಲ್ ಮನವಿ

Pinterest LinkedIn Tumblr

kejrivalಲಖನೌ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಉತ್ತರ ಪ್ರದೇಶದ ಜನತೆಗೆ ಬಿಜೆಪಿಗೆ ಮತ ನೀಡದಂತೆ ಮನವಿ ಮಾಡಿದ್ದಾರೆ.
ಉತ್ತರ ಪ್ರದೇಶದ ರಾಜಧಾನಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಅರವಿಂದ್ ಕೇಜ್ರಿವಾಲ್, ಸಾರ್ವಜನಿಕರನ್ನು ಸರತಿ ಸಾಲಿನಲ್ಲಿ ನಿಲ್ಲುವಂತೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಾಠ ಕಲಿಸುವಂತೆ ಕರೆ ನೀಡಿದ್ದಾರೆ.
ನೀವು ನರೇಂದ್ರ ಮೋದಿ ಅವರನ್ನು ದೇಶದ ಪ್ರಧಾನಿಯನ್ನಾಗಿ ಮಾಡಿದಿರಿ ಆದರೆ ಪ್ರಧಾನಿ ನರೇಂದ್ರ ಮೋದಿ ನಿಮ್ಮ ಹಣವನ್ನು ಪಡೆಯುವುದಕ್ಕೆ ನೀವೇ ಸರತಿ ಸಾಲಿನಲ್ಲಿ ನಿಲ್ಲುವಂತೆ ಮಾಡಿದರು, ಒಂದು ವೇಳೆ ಉತ್ತರ ಪ್ರದೇಶದಲ್ಲಿ 73-80 ಸ್ಥಾನಗಳಷ್ಟೇ ಬಂದಿದ್ದರೆ ನರೇಂದ್ರ ಮೋದಿ ಪ್ರಧಾನಿಯಾಗುತ್ತಿರಲಿಲ್ಲ, ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಾಠ ಕಲಿಸಲು ಸೂಕ್ತ ಸಮಯ ಬಂದಿದ್ದು ಉತ್ತರ ಪ್ರದೇಶದ ಜನತೆ ಪಾಠ ಕಲಿಸಬೇಕೆಂದು ಕೇಜ್ರಿವಾಲ್ ಹೇಳಿದ್ದಾರೆ.

Comments are closed.