ರಾಷ್ಟ್ರೀಯ

ಸಮಾಜವಾದಿ ಪಕ್ಷದ ರಾಜಕೀಯ ಕಲಹಕ್ಕೆ ನಾನು ಕಾರಣನಲ್ಲ: ಅಮರ್ ಸಿಂಗ್

Pinterest LinkedIn Tumblr

amarsinghstudio
ಲಂಡನ್: ಮುಲಾಯಂ ಸಿಂಗ್ ಯಾದವ್ ಅವರ ಕೌಟುಂಬಿಕ ಕಲಹಕ್ಕೆ ನಾನು ಕಾರಣವಲ್ಲ ಎಂದು ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಅಮರ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.
ಸಮಾಜವಾದಿ ಪಕ್ಷದ ನಾಯಕರ ಕೌಟುಂಬಿಕ ಕಲಹಕ್ಕೆ ನಾನೇ ಕಾರಣ ಎಂಬಂತೆ ಜನ ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ, ಆದರೆ ಅದಕ್ಕೆ ನಾನು ಕಾರಣನಲ್ಲ ಎಂದು ಜನತೆ ಬಳಿ ನಾನು ಮನವಿ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.
ನಡೆಯುತ್ತಿರುವ ಕೌಟುಂಬಿಕ ಕಲಹದಲ್ಲಿ ನನ್ನನ್ನು ಶತ್ರುವಿನಂತೆ ಬಿಂಬಿಸಲಾಗುತ್ತಿದೆ. ಮುಲಾಯಂ ಸಿಂಗ್ ಅವರೇ ನನ್ನನ್ನು ರಕ್ಷಿಸಬೇಕು ಎಂದು ಅಮರ್ ಸಿಂಗ್ ಮನವಿ ಮಾಡಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾರಿಗೆ ಪಕ್ಷದ ಟಿಕೆಟ್ ಸಿಕ್ಕಿದೆ, ಯಾರಿಗೆ ಸಿಕ್ಕಿಲ್ಲ ಎಂದು ನನಗೆ ತಿಳಿದಿಲ್ಲ, ಆದರೆ ಕೆಲ ಮಂದಿ ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ,ನನ್ನ ಪ್ರತಿಕೃತಿ ದಹಿಸುತ್ತಿದ್ದಾರೆ. ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

Comments are closed.