ರಾಷ್ಟ್ರೀಯ

ಬೆಂಬಲಿಗ ಶಾಸಕರ ಪಟ್ಟಿ ನೀಡಿ ಸರ್ಕಾರ ರಚನೆಗೆ ಹಕ್ಕುಮಂಡಿಸಿದ ಶಶಿಕಲಾ ಬಣದ ಪಳನಿಸ್ವಾಮಿ

Pinterest LinkedIn Tumblr


ಚೆನ್ನೈ: ತಮಿಳುನಾಡು ರಾಜ್ಯಪಾಲರನ್ನು ಭೇಟಿಯಾಗಿರುವ ಎಐಎಡಿಎಂಕೆ ಶಾಸಕಾಂಗ ಪಕ್ಷದ ನಾಯಕ ಇ.ಕೆ.ಪಳನಿಸ್ವಾಮಿ, ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ.

ಎಐಎಡಿಎಂಕೆ ಶಾಸಕಾಂಗ ಪಕ್ಷದ ನೂತನ ಮುಖ್ಯಸ್ಥರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿ ರಾಜ್ಯಪಾಲರಾದ ವಿದ್ಯಾಸಾಗರ್‌ ರಾವ್‌ ಅವರನ್ನು ಭೇಟಿ ಮಾಡಿರುವ ಪಳನಿಸ್ವಾಮಿ 126 ಶಾಸಕರ ಬೆಂಬಲವಿರುವ ಪಟ್ಟಿಯನ್ನು ನೀಡಿದ್ದಾರೆ ಎಂದು ವರದಿಯಾಗಿದೆ.

ಪಕ್ಷದ ಶಾಸಕರ ಬೆಂಬಲವಿದ್ದು, ನೂತನ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಪಳನಿಸ್ವಾಮಿ ಮನವಿ ಮಾಡಿದ್ದಾರೆ. ಆದರೆ, ರಾಜ್ಯಪಾಲರು ಯಾವುದೇ ಭರವಸೆ ನೀಡಿಲ್ಲ ಎಂದು ತಿಳಿದುಬಂದಿದೆ.

ಈ ನಡುವೆ ಉಸ್ತುವಾರಿ ಮುಖ್ಯಮಂತ್ರಿ ಓ.ಪನ್ನೀರ್‌ಸೆಲ್ವಂ ಕೂಡ ಬಹುಮತ ಸಾಬೀತು ಪಡಿಸಲು ಮುಂದಾಗಿದ್ದು, ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ.

Comments are closed.