ರಾಷ್ಟ್ರೀಯ

ಒಡಿಶಾ: ನಕ್ಸಲರ ಅಟ್ಟಹಾಸ, ಮಾವೋವಾದಿಗಳಿಂದ ಲಾಂಚ್ ಚಾಲಕನ ಹತ್ಯೆ

Pinterest LinkedIn Tumblr


ಮಾಲ್ಕಂಗಿರಿ: ಮಾವೋವಾದಿ ನಕ್ಸಲರು ಒಡಿಶಾದ ಚಿತ್ರಕುಂಡ ಜಲಾಶಯದ ಬಳಿ ಸ್ಥಳೀಯರ ಸಮ್ಮುಖದಲ್ಲಿಯೇ ಇಂದು 45ರ ಹರೆಯದ ಲಾಂಚ್ ಚಾಲಕನನ್ನು ಗುಂಡಿಟ್ಟು ಕೊಂದಿದ್ದಾರೆ. ಈ ಮುಖೇನ ಭದ್ರತಾ ಪಡೆಗಳಿಗೆ ಗಂಭೀರ ಸವಾಲನ್ನು ಒಡ್ಡಿದ್ದಾರೆ.

ಬಾರ್ಡರ್ ಸೆಕ್ಯುರಿಟಿ ಫೋರ್ಸ್ (ಬಿಎಸ್ಎಫ್) ಗೆ ಎಚ್ಚರಿಕೆ ನೀಡುವ ಸಲುವಾಗಿ ಲಾಂಚ್ ನ ಚಾಲಕ ಸಾಮ್ ಪಾಂಗಿ ಅವರ ಹತ್ಯೆ ನಡೆದಿದೆ ಎನ್ನಲಾಗಿದ್ದು ಹತ್ಯೆ ನಡೆಸಿದ ಮಾವೋವಾದಿಗಳು ಲಾಂಚ್ ನೊಂದಿಗೆ ಪರಾರಿಯಾಗಿದ್ದಾರೆ. ಸುಮಾರು ಹನ್ನೆರಡಕ್ಕೂ ಹೆಚ್ಚು ಅಂಗಡಿಗಳಿದ್ದ ಚಿತ್ರಕುಂದದ ಸ್ಪಿಲ್ ವೇ ಲಾಂಚ್ ಗಾಟ್ ನಲ್ಲಿ ಈ ಘಟನೆ ನಡೆದಿದೆ.

ಎಂಟು ಮಂದಿ ಮಾವೋವಾದಿಗಳು ಹಡಗಿನಲ್ಲಿ ಬಂದಿದ್ದು, ಅವರಲ್ಲಿ ಇಬ್ಬರು ಕೆಲಗಿಳಿದು ಪಾಂಗಿ ಅವರನ್ನು ಕೊಂದು ಹಾಕಿದ್ದಾರೆ. ಆ ಬಳಿಕ ಭದ್ರತಾ ಪಡೆಗಳಿಗೆ ಎಚ್ಚರಿಕೆಯನ್ನು ನೀಡಿ ಲಾಂಚ್ ನ್ನು ತೆಗೆದುಕೊಂಡ ಆ ಇಬ್ಬರನ್ನು ಉಳಿದ ಮತ್ತು ಆರು ಮಂದಿ ತಮ್ಮ ದೋಣಿಯಲ್ಲಿ ಹಿಂಬಾಲಿಸಿದರು.

ಸಿಪಿಐ (ಮಾವೋವಾದಿ) ಕೋರಪುಟ್ ಮುಖ್ಯಸ್ಥ ಉದಯ್ ಈ ಹತ್ಯೆಯ ರೂವಾರಿಗಳೆಂದು ಎಂದು ಮೂಲಗಳು ತಿಳಿಸಿವೆ.

ಪಾಂಗಿ ಅವರು ಪೋಲಿಸ್ ಮಾಹಿತಿದಾರರೆಂದು ತಿಳಿದ ಮಾವೋವಾದಿಗಳು ಅವರನ್ನು ಹತ್ಯೆ ಮಾಡಿದ್ದಾರೆ. ಒಡಿಶಾದ ಈ ಭಾಗಗಳಲ್ಲಿ ಮಾವೋವಾದಿಗಳು ಜಲಮಾರ್ಗದ ಮೂಲಕ ದಾಳಿ ನದೆಸುತ್ತಿರುವುದು ಬಿಎಸ್ ಎಫ್ ಗೆ ಬಹುದೊಡ್ದ ಸವಾಲಾಗಿದೆ. ಅ.16 ರಂದು ಮಾವೋವಾದಿಗಳು ಕೋಟಾಗೋಡಾ ಘಾಟ್ ಬಳಿ ಎರಡು ಬೋಟ್ ಗಳನ್ನು ಲೂಟಿ ಮಾಡಿದ್ದರು.

Comments are closed.