ರಾಷ್ಟ್ರೀಯ

ನಿರ್ಭಯಾ ಅತ್ಯಾಚಾರಿಗಳಿಗೆ ಇನ್ನೂ ಯಾಕೆ ಗಲ್ಲಿಗೇರಿಸಿಲ್ಲ? ಆಯೋಗ

Pinterest LinkedIn Tumblr


ನವದೆಹಲಿ: 2012ರ ನಿರ್ಭಯಾ ಗ್ಯಾಂಗ್ ರೇಪ್ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ವಿಳಂಬ ಮಾಡಿರುವುದು ಯಾಕೆ ಎಂದು ಪ್ರಶ್ನಿಸಿ ದೆಹಲಿ ಮಹಿಳಾ ಆಯೋಗ(ಡಿಸಿಡಬ್ಲ್ಯು) ತಿಹಾರ್ ಕಾರಾಗೃಹದ ಅಧಿಕಾರಿಗಳಿಗೆ ಹಾಗೂ ದಕ್ಷಿಣ ಜಿಲ್ಲಾ ಸಹಾಯಕ ಪೊಲೀಸ್ ಕಮಿಷನರ್ ಗೆ ನೋಟಿಸ್ ಜಾರಿ ಮಾಡಿದೆ.

ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 4 ಅಪರಾಧಿಗಳಿಗೆ ಹೈಕೋರ್ಟ್ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ಸುಪ್ರೀಂಕೋರ್ಟ್ ಮೇ 5ರಂದು ಎತ್ತಿಹಿಡಿದಿತ್ತು.

ಆದರೆ ಸುಪ್ರೀಂಕೋರ್ಟ್ ಗಲ್ಲುಶಿಕ್ಷೆಯನ್ನು ಎತ್ತಿಹಿಡಿದು 5 ತಿಂಗಳು ಕಳೆದರೂ ಕೂಡಾ ಇನ್ನೂ ಯಾಕೆ ಗಲ್ಲುಶಿಕ್ಷೆಯನ್ನು ಜಾರಿಗೊಳಿಸಿಲ್ಲ ಎಂಬ ಬಗ್ಗೆ ವಿವರಣೆ ನೀಡುವಂತೆ ಆಯೋಗ ನೋಟಿಸ್ ನಲ್ಲಿ ಪ್ರಶ್ನಿಸಿದೆ.

-ಉದಯವಾಣಿ

Comments are closed.