ರಾಷ್ಟ್ರೀಯ

ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಬೋಟ್ ಮುಳುಗಿ 13 ಪ್ರಯಾಣಿಕರ ಸಾವು

Pinterest LinkedIn Tumblr

ವಿಜಯವಾಡ: ಆಂಧ್ರ ಪ್ರದೇಶದ ಕೃಷ್ಣ ನದಿಯಲ್ಲಿ ಬೋಟ್ ಮುಳುಗಿ 13 ಮಂದಿ ಜಲಸಮಾಧಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೃಷ್ಣಾ ಜಿಲ್ಲೆ ಇಬ್ರಾಹಿಂ ಪಟ್ಟಣದಲ್ಲಿ ಈ ದುರ್ಘಟನೆ ನಡೆದಿದೆ. 35 ಪ್ರವಾಸಿಗರಿದ್ದ ಬೋಟ್ ಭವಾನಿ ಐಲ್ಯಾಂಡ್ ನಿಂದ ಪವಿತ್ರ ಸಂಗಮಕ್ಕೆ ಹೋಗುತ್ತಿದ್ದಾಗ ಮುಳುಗಿದ್ದು 13 ಪ್ರವಾಸಿಗರು ಜಲಸಮಾಧಿಯಾಗಿದ್ದು ಅವರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಜಿಪಿ ಸಾಂಭ ಶಿವ ರಾವ್ ಅವರು ಸ್ಪಷ್ಟಪಡಿಸಿದ್ದಾರೆ.

ಬೋಟ್ ದುರಂತದ ಹಿನ್ನೆಲೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು 20 ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಇನ್ನು ಹಲವು ಪ್ರಯಾಣಿಕರು ನಾಪತ್ತೆಯಾಗಿರುವ ಹಿನ್ನಲೆ ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

Comments are closed.