ಹೈದರಾಬಾದ್: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಶುಕ್ರವಾರ ಮುಂಜಾನೆ ಹೈದರಾಬಾದ್ ನ ಹೊರವಲಯಲ್ಲಿ ನಡೆದಿದೆ.
ಅನಿಲ್ ಕುಮಾರ್, ರತನ್ ಮತ್ತು ಅಮನ್ ರಾಜ್ ಮೃತ ದುರ್ದೈವಿಗಳು. ಆರ್ಮರ್ ಮಂಡಲ್ ಗ್ರಾಮದ ನಿವಾಸಿಗಳಾದ ಇವರು ಒಂದೇ ಬೈಕ್ ನಲ್ಲಿ ಬೋವೆನ್ ಪಲ್ಲಿಗೆ ತೆರಳುತ್ತಿದ್ದರು ಎಂದು ಪೆಟ್ ಬಶೀರಾಬಾದ್ ಇನ್ಸ್ ಪೆಕ್ಟರ್ ಎಸ್ ರವಿಚಂದ್ರ ತಿಳಿಸಿದ್ದಾರೆ.
ಮಧ್ಯರಾತ್ರಿ ಸುಮಾರು 1 ಗಂಟೆ ವೇಳೆಗೆ ಅಪಗಾತ ಸಂಭವಿಸಿದ್ದು, ನಿರ್ಲಕ್ಷ್ಯ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ತಲೆಗೆ ತೀವ್ರ ಪೆಟ್ಟು ಬಿದ್ದ ಕಾರಣ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಾಯಗೊಂಡಿದ್ದ ಮತ್ತೊಬ್ಬನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರಿಶೀಲಿಸಿದ ವೈದ್ಯರು ಆತ ಮೃತ ಪಟ್ಟಿರುವುದಾಗಿ ಘೋಷಿಸಿದ್ದರು.
Comments are closed.