
ಹೊಸದಿಲ್ಲಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಪ್ರಸ್ತಾವ ಮಾಡಿರುವ ವಿಷಯಗಳು ನಿಜಕ್ಕೂ ಗಂಭೀರವಾಗಿದೆ. ಇದರ ಬಗ್ಗೆ ಸಂಬಂಧಪಟ್ಟವರು ಕ್ಷಿಪ್ರಗತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.
ಈ ವಿಷಯ ಅತ್ಯಂತ ಮಹತ್ವದ್ದಾಗಿದೆ. ಎಲ್ಲ ನಾಗರಿಕರು ನ್ಯಾಯಾಂಗದ ಮೇಲೆ ಸಾಕಷ್ಟು ನಂಬಿಕೆ ಹೊಂದಿದ್ದಾರೆ. ಅದರಲ್ಲೂ ಸುಪ್ರೀಂ ಕೋರ್ಟ್ ಎಂದರೆ ಅಂತಿಮ ಎನ್ನುವ ವಿಶ್ವಾಸವಿದೆ ಎಂದರು.
ಇಂಥ ನ್ಯಾಯಾಂಗದ ವ್ಯವಸ್ಥೆಯಲ್ಲಿ ಭಾರಿ ಲೋಪಗಳು ಇದೆ ಎಂದು ಅಲ್ಲಿನ ನ್ಯಾಯಮೂರ್ತಿಗಳೇ ಹೇಳಿರುವುದು ಸಾಮಾನ್ಯ ವಿಷಯವಲ್ಲ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ರಾಹುಲ್ ತಿಳಿಸಿದರು.
ಈ ರೀತಿ ಯಾವುದೇ ಕಾಲದಲ್ಲೂ ಆಗಿರಲಿಲ್ಲ. ಮುಖ್ಯ ನ್ಯಾಯಮೂರ್ತಿ ವಿರುದ್ಧವೇ ದನಿ ಎತ್ತಿರುವ ಬಗ್ಗೆ ಎಲ್ಲರೂ ಗಮನಹರಿಸಬೇಕು ಎಂದರು.
Comments are closed.