ರಾಷ್ಟ್ರೀಯ

ದಲಿತ ನಾಯಕ ಜಿಗ್ನೇಶ್ ಮೇವಾನಿ ಪತ್ರಿಕಾಗೋಷ್ಠಿ ಬಹಿಷ್ಕರಿಸಿದ ಪತ್ರಕರ್ತರು

Pinterest LinkedIn Tumblr


ಚೆನ್ನೈ: ಆಂಗ್ಲ ಸುದ್ದಿವಾಹಿನಿಯೊಂದರ ಉಪಸ್ಥಿತಿಯಲ್ಲಿ ಮಾತನಾಡಲು ನಿರಾಕರಿಸಿದ ಗುಜರಾತ್ ಶಾಸಕ ಹಾಗೂ ದಲಿತ ನಾಯಕ ಜಿಗ್ನೇಶ್ ಮೇವಾನಿ ಅವರ ಸುದ್ದಿಗೋಷ್ಠಿಯನ್ನು ಬಹಿಷ್ಕರಿಸುವ ಮೂಲಕ ಪತ್ರಕರ್ತರು ಮಂಗಳವಾರ ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ಇಂದು ವಿದ್ಯಾರ್ಥಿಗಳು ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಲು ಮೇವಾನಿ ಒಪ್ಪಿಕೊಂಡಿದ್ದರು. ಈ ವೇಳೆ ಆಂಗ್ಲ ಸುದ್ದಿವಾಹಿನಿಯೊಂದರ ಪ್ರತಿನಿಧಿಗೆ ಹೊರಹೋಗುವಂತೆ ಮೇವಾನಿ ಸೂಚಿಸಿದ್ದು, ಇದರಿಂದ ಆಕ್ರೋಶಗೊಂಡ ಪತ್ರಕರ್ತರು ದಲಿತ ನಾಯಕನ ಸುದ್ದಿಗೋಷ್ಠಿಯನ್ನೇ ಬಹಿಷ್ಕರಿಸಿದ್ದಾರೆ.

ಆ ಸುದ್ದಿವಾಹಿನಿಯ ಪ್ರತಿನಿಧಿಯ ಉಪಸ್ಥಿತಿಯಲ್ಲಿ ತಾನು ಮಾತನಾಡುವುದಿಲ್ಲ, ಇದು ನನ್ನ ನೀತಿ, ಎಂದು ಮೇವಾನಿ ಹೇಳಿದ್ದಾರೆ. ಆದರೆ ಚೆನ್ನೈ ಪತ್ರಕರ್ತರಿಗೆ ಮೇವಾನಿ ಪ್ರತಿಕ್ರಿಯೆ ಇರುಸುಮುರುಸು ಉಂಟುಮಾಡಿದೆ. ‘ನೀವು ಈ ರೀತಿ ಆಗ್ರಹಿಸುವಂತಿಲ್ಲ, ಮಾತನಾಡದೇ ಇರುವುದು ನಿಮಗೆ ಬಿಟ್ಟ ವಿಚಾರ ಎಂದು’ ಪತ್ರಕರ್ತರು ಸಾಮೂಹಿಕವಾಗಿ ಗೋಷ್ಠಿಯನ್ನು ಬಹಿಷ್ಕರಿಸಿದ್ದಾರೆ.

Comments are closed.