ರಾಷ್ಟ್ರೀಯ

ವಿವಾಹವಾಗಬೇಕಿದ್ದ ಯುವಕನ ಗುಪ್ತಾಂಗ ಕತ್ತರಿಸಿದ ದುಷ್ಕರ್ಮಿಗಳು

Pinterest LinkedIn Tumblr


ಭೋಪಾಲ: ವಿವಾಹಕ್ಕೆ ಕೆಲ ದಿನಗಳು ಬಾಕಿಯಿರುವಂತೆ ಯುವಕನ ಗುಪ್ತಾಂಗ ಕತ್ತರಿಸಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಆದರೆ, ಕೃತ್ಯದ ಹಿಂದಿರುವ ಕಾರಣ ಇದುವರೆಗೂ ತಿಳಿದುಬಂದಿಲ್ಲ. ‘ನಾವು ಕ್ಲೂಲೇಸ್ ಆಗಿದ್ದು, ಸಂತ್ರಸ್ತ ಯುವಕ ಆರೋಪಿಗಳನ್ನು ಗುರುತಿಸುವ ಸ್ಥಿತಿಯಲ್ಲಿ ಇಲ್ಲ’ ಎಂದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅಮಿತ್ ಶರ್ಮಾ ತಿಳಿಸಿದ್ದಾರೆ.

ದುಷ್ಕರ್ಮಿಗಳು ಯುವಕನ ಗುಪ್ತಾಂಗ ಸಮೇತ ಪರಾರಿಯಾಗಿದ್ದಾರೆ. ಗುಪ್ತಾಂಗವನ್ನು ಪತ್ತೆ ಹಚ್ಚಿ ಅದನ್ನು ಶಸ್ತ್ರ ಚಿಕಿತ್ಸೆ ಮೂಲಕ ಜೋಡಿಸಲು ಪ್ರಯತ್ನ ನಡೆಸಲಾಗುತ್ತಿದೆ.

ಪೊಲೀಸರು ಈಗ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಆದರೆ, ಪೊಲೀಸರ ಪ್ರಯತ್ನ ವಿಫಲವಾಗಿದೆ. ‘ಯವಕ ಮಲವಿಸರ್ಜನೆಗೆಂದು ನದಿ ಬಯಲಿಗೆ ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದೆ’ ಎಂದು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಂತ್ರಸ್ತನ ಸಂಬಂಧಿಗಳು ಯಾರ ಮೇಲೆಯೂ ಶಂಕೆ ವ್ಯಕ್ತಪಡಿಸಿಲ್ಲ. ಯುವಕನ ಹೇಳಿಕೆಗಾಗಿ ಪೊಲೀಸರು ಕಾಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

Comments are closed.