ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಹಿಮಪಾತದಲ್ಲಿ ಕನಿಷ್ಠ ಮೂವರು ಯೋಧರು ಹುತಾತ್ಮರಾಗಿದ್ದಾರೆ ಮತ್ತು ಓರ್ವ ಯೋಧ ಗಾಯಗೊಂಡಿದ್ದಾರೆ.
ಇಂದು ಸಂಜೆ ಕುಪ್ವಾರದ ಮಚಿಲ್ ಸೆಕ್ಟರ್ ನಲ್ಲಿ ಹಿಮಪಾತ ಸಂಭವಿಸಿದ್ದು, ಗಾಯಗೊಂಡ ಯೋಧನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆಯಷ್ಟೇ ಮುಂದಿನ 24 ಗಂಟೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ, ಕುಪ್ವಾರ, ಬಂಡಿಪೋರೆ ಮತ್ತು ಶೋಪಿಯಾನ್ ಜಿಲ್ಲೆಗಳಲ್ಲಿ ಹಿಮಪಾತ ಸಂಭವಿಸುವ ಸಾಧ್ಯತೆ ಇದೆ ಮುನ್ನೆಚ್ಚರಿಕೆ ನೀಡಲಾಗಿತ್ತು.
Comments are closed.