ರಾಷ್ಟ್ರೀಯ

ಪಾಕ್‌ ಉಗ್ರನ ಬಿಡಿಸಿಕೊಂಡು ಪರಾರಿ: ಉಗ್ರರ ದಾಳಿಯಲ್ಲಿ ಹುತಾತ್ಮರಾದ ಇಬ್ಬರು ಪೊಲೀಸರು

Pinterest LinkedIn Tumblr


ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿಯ ಹೊರವಲಯದಲ್ಲಿ ಮಂಗಳವಾರ ಲಷ್ಕರೆ ತಯ್ಬಾ ಉಗ್ರರು ಆಸ್ಪತ್ರೆಯೊಂದರ ಮೇಲೆ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ.

ಪೊಲೀಸ್‌ ವಶದಲ್ಲಿದ್ದ ಪಾಕ್‌ ಭಯೋತ್ಪಾದಕನನ್ನು ಬಿಡಿಸಿಕೊಂಡು ಹೋಗುವುದಕ್ಕಾಗಿ ಉಗ್ರರು ಈ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಕಿಸ್ತಾನದ ಎಲ್‌ಇಟಿ ಉಗ್ರ ನವೀದ್‌ ಜುಟ್‌ನನ್ನು 2014ರಲ್ಲಿ ದಕ್ಷಿಣ ಕಾಶ್ಮೀರದ ಕುಲ್ಗಾಂನಲ್ಲಿ ಬಂಧಿಸಲಾಗಿತ್ತು. ಆತನನ್ನು ಬಿಡಿಸಿಕೊಂಡು ಪರಾರಿಯಾಗುವಲ್ಲಿ ಉಗ್ರರು ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಜುಟ್‌ ಅಲಿಯಾಸ್‌ ಅಬು ಹನ್ಜಾಲನನ್ನು ಕರೆದೊಯ್ಯುತ್ತಿದ್ದ ಪೊಲೀಸ್‌ ತಂಡದ ಮೇಲೆ ಕಾಕ ಸರಾಯ್‌ ಪ್ರದೇಶದ ಆಸ್ಪತ್ರೆಯೊಂದರ ಹೊರಗೆ ಉಗ್ರರು ಗುಂಡು ಹಾರಿಸಿದರು.

ದಾಳಿಯಲ್ಲಿ ಒಬ್ಬ ಪೊಲೀಸ್‌ ಸಿಬ್ಬಂದಿ ಮೃತಪಟ್ಟು ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಒಬ್ಬ ಪೊಲೀಸ್‌ ಸಿಬ್ಬಂದಿಯ ಕಾರ್ಬೈನ್‌ ರೈಫಲ್‌ ಕೂಡ ನಾಪತ್ತೆಯಾಗಿದೆ ಎಂದು ಅಧಿಕಾರಿ ತಿಳಿಸಿದರು.

ಉಗ್ರರ ಬೇಟೆಗೆ ವ್ಯಾಪಕ ಬಲೆ ಬೀಸಲಾಗಿದ್ದು, ಈ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿವೆ.

Comments are closed.