ರಾಷ್ಟ್ರೀಯ

ಕರ್ನಾಟಕದಲ್ಲಿ ಈ ಬಾರಿಯೂ ಕಾಂಗ್ರೆಸ್‌ ಸರಕಾರ: ಸೋನಿಯಾ ಗಾಂಧಿ ಭವಿಷ್ಯ

Pinterest LinkedIn Tumblr


ಹೊಸದಿಲ್ಲಿ: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಹಂತದಲ್ಲಿ ಬಿಜೆಪಿ ಕೆಲವು ತಂತ್ರಗಳನ್ನು ಉಪಯೋಗಿಸುತ್ತಿದೆ. ನಾವು ಕೂಡ ರಣತಂತ್ರ ಮಾಡಬೇಕು ಎಂದು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಕರೆ ನೀಡಿದ್ದಾರೆ.

ಸಂಸದೀಯ ಪಕ್ಷದ ಸಭೆಯಲ್ಲಿ ಸೋನಿಯಾ ಗಾಂಧಿ ಮಾತನಾಡಿದರು.

ಕಾಂಗ್ರೆಸ್‌ ಈಗ ಮತ್ತೆ ಗೆಲುವಿನ ರಹದಾರಿಗೆ ಬಂದಿದೆ. ಗುಜರಾತ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದೇವು. ರಾಜಸ್ಥಾನದಲ್ಲಿ ಮರು ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಕಂಡಿದೆ. ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲೂ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದರು.

ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಕೋಮು ಗಲಭೆ ಮೂಲಕ ಲಾಭ ಮಾಡಿಕೊಳ್ಳಲು ಹವಣಿಸುತ್ತಿದೆ. ಅದಕ್ಕೆ ನಾವು ಆಸ್ಪದ ಕೊಡಬಾರದು ಎಂದರು.

ಎಲ್ಲರೂ ಸಾಂಘಿಕ ಹೋರಾಟದಿಂದ ಶ್ರಮವಹಿಸಿದರೆ ಗೆಲವು ಕೈವಶವಾಗಲಿದೆ. ರಾಹುಲ್‌ ಗಾಂಧಿ ನೇತೃತ್ವದಲ್ಲಿ ಪಕ್ಷವನ್ನು ಮುನ್ನಡೆಸಬೇಕಾಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಸೋನಿಯಾ ತಿಳಿಸಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಮಾನ ಮನಸ್ಕ ಪಕ್ಷಗಳ ಜತೆ ಕೈ ಜೋಡಿಸಿ ಬಿಜೆಪಿಯನ್ನು ಎದುರಿಸಬೇಕಾಗಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸೋಲು ಖಚಿತ ಎಂದು ಸೋನಿಯಾ ಗಾಂಧಿ ಹೇಳಿದರು.

Comments are closed.