ರಾಷ್ಟ್ರೀಯ

ಐ ಲವ್‌ ಪಾಕಿಸ್ತಾನ ಅಂದ್ರು ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌

Pinterest LinkedIn Tumblr


ನವದೆಹಲಿ: ಪ್ರಧಾನಿ ಮೋದಿ ಅವರು ನೀಚ್‌ ಆದ್ಮಿ ಎಂದು ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದ ಕಾಂಗ್ರೆಸ್‌ ನಾಯಕ ಮಣಿಶಂಕರ್‌ ಅಯ್ಯರ್‌ ಅವರು ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ.

ಕರಾಚಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಅವರು, ನಾನು ಪಾಕಿಸ್ತಾನವನ್ನು ಪ್ರೀತಿಸುತ್ತೇನೆ. ಏಕೆಂದರೆ ನಾನು ಭಾರತವನ್ನು ಪ್ರೀತಿಸುತ್ತೇನೆ ಎಂದು ಹೇಳುವ ಮೂಲಕ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ.

ಎರಡು ರಾಷ್ಟ್ರಗಳು ಮಾತನಾಡಲು ಸ್ವಲ್ಪ ಸಮಯಾವಕಾಶ ಬೇಕಾಗಿದೆ. ಸಮಸ್ಯೆ ಪರಿಹಾರಕ್ಕಾಗಿ ಇಸ್ಲಾಮಾಬಾದ್ ದ್ವಿಪಕ್ಷೀಯ ಪ್ರಾಮುಖ್ಯತೆ ಮಾತುಕತೆ ನೀತಿಯನ್ನು ಒಪ್ಪಿಕೊಂಡಿದೆ. ಆದರೆ, ದೆಹಲಿ ಅದನ್ನು ಒಪ್ಪಿಲ್ಲ ಎಂದಿದ್ದಾರೆ.

ನಿರಂತರ ಮಾತುಕತೆಯಿಂದಷ್ಟೇ ಭಾರತ ಮತ್ತು ಪಾಕಿಸ್ತಾನದ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯ. ನಿನ್ನ ನೆರೆಹೊರೆಯವರನ್ನು ನಿನ್ನಂತೆಯೇ ಪ್ರೀತಿಸು ಎನ್ನುವಂತೆ ಭಾರತವನ್ನು ನಾನು ಪ್ರೀತಿಸುತ್ತೇನೆ. ಅದರಂತೆ ಪಾಕಿಸ್ತಾನವನ್ನು ಪ್ರೀತಿಸುತ್ತೇನೆ ಎಂದಿದ್ದಾರೆ.

ಈ ಹಿಂದೆಯೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ‘ನೀಚ್ ಆದ್ಮಿ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಅವರು ರಾಹುಲ್‌ ಗಾಂಧಿ ಸೂಚನೆ ಮೇರೆಗೆ ಕ್ಷಮೆ ಕೋರಿದ್ದರು. ಅಲ್ಲದೆ, ಅವರನ್ನು ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿತ್ತು.

Comments are closed.