ರಾಷ್ಟ್ರೀಯ

‘ಐ ಲವ್ ಪಾಕಿಸ್ತಾನ’ ಎಂದ ಮಣಿಶಂಕರ್ ಅಯ್ಯರ್ ವಿರುದ್ಧ ದೇಶದ್ರೋಹದ ಪ್ರಕರಣ

Pinterest LinkedIn Tumblr

1
ಕೋಟಾ: ಶತ್ರುರಾಷ್ಟ್ರ ಪಾಕಿಸ್ತಾನದ ಪರ ಹೇಳಿಕೆ ನೀಡಿದ ಕಾಂಗ್ರೆಸ್ ಉಚ್ಚಾಟಿತ ನಾಯಕ ಮಣಿಶಂಕರ್ ಅಯ್ಯರ್ ವಿರುದ್ಧ ಕೋಟಾದ ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೇಶದ್ರೋಹ ಹಾಗೂ ಮಾನನಷ್ಟ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಫೆ.20ರಂದು ವಿಚಾರಣೆ ನಡೆಯಲಿದೆ.

ಕೋಟಾದ ಭಾರತೀಯ ಜನತಾ ಪಾರ್ಟಿಯ ಒಬಿಸಿ ವಿಂಗ್ ಮುಖ್ಯಸ್ಥ ಅಶೋಕ್ ಚೌಧರಿ ಅವರು ಐಪಿಸಿ ಸೆಕ್ಷನ್ 124 (ಎ), 500 ಮತ್ತು 504 ಅಡಿಯಲ್ಲಿ ಅಯ್ಯರ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಕರಾಚಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಅಯ್ಯರ್, ‘ನಾನು ಪಾಕಿಸ್ತಾನವನ್ನು ಪ್ರೀತಿಸುತ್ತೇನೆ. ಏಕೆಂದರೆ, ನಾನು ಭಾರತವನ್ನು ಪ್ರೀತಿಸುತ್ತೇನೆ’ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು. ಅಲ್ಲದೆ, ಉಭಯ ರಾಷ್ಟ್ರಗಳು ಪರಸ್ಪರ ಮಾತನಾಡಲು ಸ್ವಲ್ಪ ಸಮಯಾವಕಾಶ ಬೇಕಾಗಿದೆ. ಸಮಸ್ಯೆ ಇತ್ಯರ್ಥಕ್ಕೆ ಇಸ್ಲಾಮಾಬಾದ್ ದ್ವೀಪಕ್ಷೀಯ ಪ್ರಾಮುಖ್ಯತೆ ಮಾತುಕತೆಯ ನೀತಿಯನ್ನು ಒಪ್ಪಿದೆ. ಆದರೆ, ದಿಲ್ಲಿ ಒಪ್ಪಿಲ್ಲ ಎಂದು ನಾಲಿಗೆ ಹರಿಬಿಟ್ಟಿದ್ದರು.

ಮಣಿಶಂಕರ್ ಅಯ್ಯರ್ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಕೂಡಲೇ ಅವರನ್ನು ಬಂಧಿಸುವಂತೆ ದೂರು ನೀಡಿದೆ.

Comments are closed.