ರಾಷ್ಟ್ರೀಯ

ಬಸ್ಸಿನಲ್ಲಿ ವಿದ್ಯಾರ್ಥಿನಿ ಪಕ್ಕ ಕೂತು ಹಸ್ತಮೈಥುನ: ಆರೋಪಿ ಬಗ್ಗೆ ಸುಳಿವು ನೀಡಿದವರಿಗೆ ಪೊಲೀಸರಿಂದ ಬಹಮಾನ ಘೋಷಣೆ

Pinterest LinkedIn Tumblr

ದೆಹಲಿ: ದೆಹಲಿ ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿನಿ ಪಕ್ಕ ಬಸ್ಸಿನಲ್ಲಿ ಕೂತು ಆಕೆಯ ಮುಂದೆ ಹಸ್ತಮೈಥುನ ಮಾಡಿದ ವ್ಯಕ್ತಿಯ ಬಗ್ಗೆ ಮಾಹಿತಿ ನೀಡಿದವರಿಗೆ 25,000 ರೂ. ಇನಾಮು ಕೊಡುವುದಾಗಿ ದೆಹಲಿ ಪೊಲೀಸರು ಘೋಷಿಸಿದ್ದಾರೆ.

ಹುಡುಗಿಯ ಎದುರು ಬಸ್ಸಿನಲ್ಲಿ ಹಸ್ತ ಮೈಥುನ ಮಾಡಿಕೊಂಡ ವ್ಯಕ್ತಿಯ ವಿರುದ್ಧ ದಿಲ್ಲಿಯ ವಸಂತ ವಿಹಾರ್‌ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. ಆರೋಪಿ ವ್ಯಕ್ತಿಯ ಬಗ್ಗೆ ಮಾಹಿತಿ ಇರುವವರು ತಮ್ಮ ಸಮೀಪದ ಪೊಲೀಸ್‌ ಠಾಣೆಗೆ ತಿಳಿಸುವಂತೆ ಹೇಳಲಾಗಿದೆ.

ಆರೋಪಿಯ ಬಗ್ಗೆ ಮಾಹಿತಿ ನೀಡುವವರ ಗುರುತು ವಿವರಗಳನ್ನು ರಹಸ್ಯವಾಗಿಡಲಾಗುವುದು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದೆಹಲಿಯ ಜನದಟ್ಟನೆಯ ಬಸ್ಸಿನಲ್ಲಿ ಆರೋಪಿ ವಿಕೃತ ಕಾಮಿಯು ನಡೆಸಿದ್ದ ಕೃತ್ಯಗಳನ್ನು ಸಂತ್ರಸ್ತೆ ತನ್ನ ಮೊಬೈಲ್‌ ಕ್ಯಾಮೆರಾದಲ್ಲಿ ದಾಖಲಿಸಿಕೊಂಡಿದ್ದಳು.

Comments are closed.