ಅಹಮದಾಬಾದ್: ಗುಜರಾತಿನ ವಡ್ಗಾಂ ಕ್ಷೇತ್ರದ ಶಾಸಕ, ದಲಿತ ಮುಖಂಡ ಜಿಗ್ನೇಶ್ ಮೇವಾನಿ ರನ್ನು ಅಹಮದಾಬಾದ್ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಕಳೆದ ಶುಕ್ರವಾರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ದಲಿತ ಹೋರಾಟ ಗಾರ ಭಾನು ವಂಕರ್ ಅವರ ಬೇಡಿಕೆಗಳನ್ನು ಬೆಂಬಲಿಸಿ ಹಮ್ಮಿಕೊಂಡಿದ್ದ ಪ್ರತಿಭ ಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳುತ್ತಿದ್ದಾಗ ಜಿಗ್ನೇಶ್ ರನ್ನು ಬಂಧಿಸಲಾ ಗಿದೆ.
ಪೊಲೀಸರು ಜೀಪ್ ಒಳಗೆ ಕೂರುವಂತೆ ಒತ್ತಾಯ ಮಾಡುತ್ತಿರುವ ವಿಡಿಯೊ ದೃಶ್ಯ ಜಿಗ್ನೇಶ್ ಟ್ವಿಟರ್ ಖಾತೆಯಲ್ಲಿ ಪ್ರಕಟಗೊಂಡಿದೆ. ಜಿಗ್ನೇಶ್ ರನ್ನು ಕಾರಿನಿಂದ ಬಲ ವಂತವಾಗಿ ಎಳೆದಿರುವ ಪೊಲೀಸರು, ಕಾರು ಕೀ ಮುರಿದಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾಗಲು ಹೊರಟ್ಟಿದ್ದ ಸಂದರ್ಭದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಜೆಎನ್ಯು ವಿದ್ಯಾರ್ಥಿ ಮುಖಂಡ ಶೆಹ್ಲಾ ರಶೀದ್ ಟ್ವೀಟ್ ಮಾಡಿದ್ದಾರೆ.
ರಾಜ್ಯ ಸರಕಾರ ಭೂಮಿ ಹಂಚಿಕೆ ಸಂಬಂಧಿಸಿದಂತೆ ಅನುಸರಿಸುತ್ತಿರುವ ವಿಳಂಬ ಧೋರಣೆಯನ್ನು ಪ್ರತಿಭಟಿಸಿ ಭಾನು ವಂಕರ್ ಪಟ್ನಾ ಜಿಲ್ಲಾಧಿಕಾರಿ ಕಚೇರಿ ಎದುರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
Comments are closed.